ಅಯೋಧ್ಯೆ: ‘ಸುಪ್ರೀಂ ಕೋರ್ಟ್ ತೀರ್ಪು ಬಳಿಕ ಅಯೋಧ್ಯೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಸೀದಿಯು, ವಕ್ಫ್ ಕಾಯ್ದೆಗೆ ವಿರುದ್ಧವಾಗಿದೆ ಮತ್ತು ಶರೀಯತ್ ಕಾನೂನಿನ ಪ್ರಕಾರ ನಿಯಮಬಾಹಿರವಾಗಿದೆ’ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್ಬಿ) ಸದಸ್ಯ ಜಫರ್ಯಾಬ್ ಜಿಲಾನಿ ಬುಧವಾರ ಹೇಳಿದ್ದಾರೆ.