<p><strong>ಅಯೋಧ್ಯೆ: </strong>ರಾಮ ಜನ್ಮಭೂಮಿಯಿಂದ ಸುಮಾರು 24 ಕಿ.ಮೀ.ದೂರವಿರುವ ಧನ್ನೀಪುರ್ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ಗಣರಾಜ್ಯೋತ್ಸವದ ದಿನವಾದ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.</p>.<p>ಗಣರಾಜ್ಯ ದಿನದ ಪ್ರಯುಕ್ತಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯ ಮುಖ್ಯಸ್ಥ ಜುಫರ್ ಅಹಮದ್ ಫಾರೂಕಿ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಂಡಳಿಯ ಸದಸ್ಯರು ಒಂಬತ್ತು ಗಿಡಗಳನ್ನು ನೆಟ್ಟರು.</p>.<p>ಮಸೀದಿ ನಿರ್ಮಾಣದ ಮೇಲ್ವಿಚಾರಣೆಗೆ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯುಇಂಡೊ ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್ ರಚಿಸಿತ್ತು. ಈ ಟ್ರಸ್ಟ್ ಅಸ್ತಿತ್ವಕ್ಕೆ ಬಂದು ಸರಿಯಾಗಿ ಆರು ತಿಂಗಳ ನಂತರ ಮಸೀದಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಯಿತು.</p>.<p>ಅವಧ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಆರ್.ಕೆ.ಸಿಂಗ್ ಹಾಗೂ ಅವರ ಪತ್ನಿ ಡಾ.ಸುನಿತಾ ಸೆಂಗರ್ ಅವರು ಮಸೀದಿ ನಿರ್ಮಾಣಕ್ಕೆ ₹22 ಸಾವಿರ ದೇಣಿಗೆ ನೀಡಿದರು.</p>.<p>‘ಉದ್ದೇಶಿತ ಮಸೀದಿಯು ಬಾಬ್ರಿ ಮಸೀದಿಗಿಂತಲೂ ದೊಡ್ಡದಾಗಿರಲಿದ್ದು ಅದರ ವಿನ್ಯಾಸವೂ ವಿಭಿನ್ನವಾಗಿರಲಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಗೆ ನೀಡಲಾಗಿರುವ ಐದು ಎಕರೆ ಜಾಗದಲ್ಲಿ ಅತ್ಯಾಧುನಿಕ ಆಸ್ಪತ್ರೆಯೂ ತಲೆ ಎತ್ತಲಿದೆ. ಇದು 300 ಹಾಸಿಗೆಗಳನ್ನೊಳಗೊಂಡ ವಿಶೇಷ ಘಟಕವನ್ನು ಹೊಂದಿರಲಿದೆ. ಈ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ’ ಎಂದು ಇಂಡೊ ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್ನ ಕಾರ್ಯದರ್ಶಿ ಅಥರ್ ಹುಸೇನ್ ಹೇಳಿದ್ದಾರೆ.</p>.<p>‘ನಮ್ಮ ಸಂವಿಧಾನವು ಬಹುತ್ವದ ನೆಲೆಯಲ್ಲಿ ಸ್ಥಾಪಿತಗೊಂಡಿದೆ. ಈ ಮಸೀದಿಯು ಬಹುತ್ವವನ್ನು ಪ್ರತಿಪಾದಿಸಲಿದೆ. ಹೀಗಾಗಿ ಗಣರಾಜ್ಯೋತ್ಸವದಂದೇ ಅಡಿಗಲ್ಲು ಹಾಕಲು ನಿರ್ಧರಿಸಲಾಗಿತ್ತು’ ಎಂದೂ ಅವರು ನುಡಿದಿದ್ದಾರೆ.</p>.<p>ಈ ಮಸೀದಿಗೆ 1857ರಲ್ಲಿ ಬ್ರಿಟೀಷರ ಆಳ್ವಿಕೆಯ ವಿರುದ್ಧ ನಡೆದ ಬಂಡಾಯದ ಹೋರಾಟಗಾರರಲ್ಲಿ ಒಬ್ಬರಾದ ಮೌಲ್ವಿ ಅಹ್ಮದುಲ್ಲಾ ಷಾ ಅವರ ಹೆಸರಿಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ: </strong>ರಾಮ ಜನ್ಮಭೂಮಿಯಿಂದ ಸುಮಾರು 24 ಕಿ.ಮೀ.ದೂರವಿರುವ ಧನ್ನೀಪುರ್ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ಗಣರಾಜ್ಯೋತ್ಸವದ ದಿನವಾದ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.</p>.<p>ಗಣರಾಜ್ಯ ದಿನದ ಪ್ರಯುಕ್ತಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯ ಮುಖ್ಯಸ್ಥ ಜುಫರ್ ಅಹಮದ್ ಫಾರೂಕಿ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಂಡಳಿಯ ಸದಸ್ಯರು ಒಂಬತ್ತು ಗಿಡಗಳನ್ನು ನೆಟ್ಟರು.</p>.<p>ಮಸೀದಿ ನಿರ್ಮಾಣದ ಮೇಲ್ವಿಚಾರಣೆಗೆ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯುಇಂಡೊ ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್ ರಚಿಸಿತ್ತು. ಈ ಟ್ರಸ್ಟ್ ಅಸ್ತಿತ್ವಕ್ಕೆ ಬಂದು ಸರಿಯಾಗಿ ಆರು ತಿಂಗಳ ನಂತರ ಮಸೀದಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಯಿತು.</p>.<p>ಅವಧ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಆರ್.ಕೆ.ಸಿಂಗ್ ಹಾಗೂ ಅವರ ಪತ್ನಿ ಡಾ.ಸುನಿತಾ ಸೆಂಗರ್ ಅವರು ಮಸೀದಿ ನಿರ್ಮಾಣಕ್ಕೆ ₹22 ಸಾವಿರ ದೇಣಿಗೆ ನೀಡಿದರು.</p>.<p>‘ಉದ್ದೇಶಿತ ಮಸೀದಿಯು ಬಾಬ್ರಿ ಮಸೀದಿಗಿಂತಲೂ ದೊಡ್ಡದಾಗಿರಲಿದ್ದು ಅದರ ವಿನ್ಯಾಸವೂ ವಿಭಿನ್ನವಾಗಿರಲಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಗೆ ನೀಡಲಾಗಿರುವ ಐದು ಎಕರೆ ಜಾಗದಲ್ಲಿ ಅತ್ಯಾಧುನಿಕ ಆಸ್ಪತ್ರೆಯೂ ತಲೆ ಎತ್ತಲಿದೆ. ಇದು 300 ಹಾಸಿಗೆಗಳನ್ನೊಳಗೊಂಡ ವಿಶೇಷ ಘಟಕವನ್ನು ಹೊಂದಿರಲಿದೆ. ಈ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ’ ಎಂದು ಇಂಡೊ ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್ನ ಕಾರ್ಯದರ್ಶಿ ಅಥರ್ ಹುಸೇನ್ ಹೇಳಿದ್ದಾರೆ.</p>.<p>‘ನಮ್ಮ ಸಂವಿಧಾನವು ಬಹುತ್ವದ ನೆಲೆಯಲ್ಲಿ ಸ್ಥಾಪಿತಗೊಂಡಿದೆ. ಈ ಮಸೀದಿಯು ಬಹುತ್ವವನ್ನು ಪ್ರತಿಪಾದಿಸಲಿದೆ. ಹೀಗಾಗಿ ಗಣರಾಜ್ಯೋತ್ಸವದಂದೇ ಅಡಿಗಲ್ಲು ಹಾಕಲು ನಿರ್ಧರಿಸಲಾಗಿತ್ತು’ ಎಂದೂ ಅವರು ನುಡಿದಿದ್ದಾರೆ.</p>.<p>ಈ ಮಸೀದಿಗೆ 1857ರಲ್ಲಿ ಬ್ರಿಟೀಷರ ಆಳ್ವಿಕೆಯ ವಿರುದ್ಧ ನಡೆದ ಬಂಡಾಯದ ಹೋರಾಟಗಾರರಲ್ಲಿ ಒಬ್ಬರಾದ ಮೌಲ್ವಿ ಅಹ್ಮದುಲ್ಲಾ ಷಾ ಅವರ ಹೆಸರಿಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>