<p><strong>ನವದೆಹಲಿ:</strong> ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಶದ ಮೊದಲ ಪ್ರಜೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ಅವರು ₹5,00,100 ದೇಣಿಗೆ ನೀಡಿದ್ದಾರೆ.</p>.<p>ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಎಲ್ಲ ಜಾತಿ, ಧರ್ಮ ಸೇರಿದಂತೆ ಸಮುದಾಯಗಳಿಂದ ಧನ ಸಹಾಯ ಸ್ವೀಕರಿಸಲು ಪ್ರಾರಂಭಿಸಿದ್ದೇವೆ ಎಂದು ವಿಶ್ವ ಹಿಂದೂ ಪರಿಷತ್ನ ಹಿರಿಯ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.</p>.<p>ರಾಷ್ಟ್ರಪತಿ ರಾಮನಾಥ್ ಕೋವಿಂದ್ಅವರು ದೇಶದ ಮೊದಲ ಪ್ರಜೆ. ಹಾಗಾಗಿ ನಾವು ಈ ದೇಣಿಗೆ ಸಂಗ್ರಹ ಅಭಿಯಾನವನ್ನು ಅವರಿಂದಲೇ ಪ್ರಾರಂಭಿಸುವ ಸಲುವಾಗಿ ಅಲ್ಲಿಗೆ ಹೋಗಿದ್ದೆವು. ರಾಮನಾಥ್ ಕೋವಿಂದ್ ಕುಟುಂಬವನ್ನು ಭೇಟಿಯಾಗಿದ್ದೇವೆ. ಅವರು ₹5,00,100 ದೇಣಿಗೆ ನೀಡಿ ಶುಭಾಶಯಗಳನ್ನು ಕೋರಿದ್ದಾರೆ ಎಂದು ವಿಎಚ್ಪಿ ಮುಖಂಡ ಅಲೋಕ್ ಕುಮಾರ್ ತಿಳಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/ram-temple-construction-in-ayodhya-diamond-trader-from-surat-donates-rs-11-crore-796588.html" itemprop="url">ಅಯೋಧ್ಯೆ ರಾಮ ಮಂದಿರ ನಿರ್ಮಾಣ: ₹11 ಕೋಟಿ ದೇಣಿಗೆ ನೀಡಿದ ವಜ್ರದ ವ್ಯಾಪಾರಿ </a></p>.<p>ಮಂದಿರ ನಿರ್ಮಾಣಕ್ಕಾಗಿ ಆರಂಭಿಕ ವೆಚ್ಚ 13 ಕೋಟಿ ರೂ. ಅಂದಾಜಿಸಲಾಗಿದೆ. ಹಾಗಾಗಿ ದೇಣಿಗೆ ಸಂಗ್ರಹಿಸಲು 5,25,000 ಹಳ್ಳಿಗಳಲ್ಲಿ 65,000 ಕುಟುಂಬಗಳನ್ನು ತಲುಪಬೇಕಿದೆ. ಈ ಅಭಿಯಾನವು ದೇಶವನ್ನು ಏಕೀಕರಿಸಲಿದೆ ಎಂದವರು ಅಭಿಪ್ರಾಯಪಟ್ಟರು.</p>.<p>ಏತನ್ಮಧ್ಯೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಹ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಒಂದು ಲಕ್ಷ ರೂ.ಗಳ ದೇಣಿಗೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಶದ ಮೊದಲ ಪ್ರಜೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ಅವರು ₹5,00,100 ದೇಣಿಗೆ ನೀಡಿದ್ದಾರೆ.</p>.<p>ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಎಲ್ಲ ಜಾತಿ, ಧರ್ಮ ಸೇರಿದಂತೆ ಸಮುದಾಯಗಳಿಂದ ಧನ ಸಹಾಯ ಸ್ವೀಕರಿಸಲು ಪ್ರಾರಂಭಿಸಿದ್ದೇವೆ ಎಂದು ವಿಶ್ವ ಹಿಂದೂ ಪರಿಷತ್ನ ಹಿರಿಯ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.</p>.<p>ರಾಷ್ಟ್ರಪತಿ ರಾಮನಾಥ್ ಕೋವಿಂದ್ಅವರು ದೇಶದ ಮೊದಲ ಪ್ರಜೆ. ಹಾಗಾಗಿ ನಾವು ಈ ದೇಣಿಗೆ ಸಂಗ್ರಹ ಅಭಿಯಾನವನ್ನು ಅವರಿಂದಲೇ ಪ್ರಾರಂಭಿಸುವ ಸಲುವಾಗಿ ಅಲ್ಲಿಗೆ ಹೋಗಿದ್ದೆವು. ರಾಮನಾಥ್ ಕೋವಿಂದ್ ಕುಟುಂಬವನ್ನು ಭೇಟಿಯಾಗಿದ್ದೇವೆ. ಅವರು ₹5,00,100 ದೇಣಿಗೆ ನೀಡಿ ಶುಭಾಶಯಗಳನ್ನು ಕೋರಿದ್ದಾರೆ ಎಂದು ವಿಎಚ್ಪಿ ಮುಖಂಡ ಅಲೋಕ್ ಕುಮಾರ್ ತಿಳಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/ram-temple-construction-in-ayodhya-diamond-trader-from-surat-donates-rs-11-crore-796588.html" itemprop="url">ಅಯೋಧ್ಯೆ ರಾಮ ಮಂದಿರ ನಿರ್ಮಾಣ: ₹11 ಕೋಟಿ ದೇಣಿಗೆ ನೀಡಿದ ವಜ್ರದ ವ್ಯಾಪಾರಿ </a></p>.<p>ಮಂದಿರ ನಿರ್ಮಾಣಕ್ಕಾಗಿ ಆರಂಭಿಕ ವೆಚ್ಚ 13 ಕೋಟಿ ರೂ. ಅಂದಾಜಿಸಲಾಗಿದೆ. ಹಾಗಾಗಿ ದೇಣಿಗೆ ಸಂಗ್ರಹಿಸಲು 5,25,000 ಹಳ್ಳಿಗಳಲ್ಲಿ 65,000 ಕುಟುಂಬಗಳನ್ನು ತಲುಪಬೇಕಿದೆ. ಈ ಅಭಿಯಾನವು ದೇಶವನ್ನು ಏಕೀಕರಿಸಲಿದೆ ಎಂದವರು ಅಭಿಪ್ರಾಯಪಟ್ಟರು.</p>.<p>ಏತನ್ಮಧ್ಯೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಹ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಒಂದು ಲಕ್ಷ ರೂ.ಗಳ ದೇಣಿಗೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>