<p><strong>ಗಾಂಧಿನಗರ(ಗುಜರಾತ್): </strong>ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರವು ಭಾರತದ ಸ್ವಾಭಿಮಾನ ಮತ್ತು ಹೆಮ್ಮೆಯ ಸಂಕೇತವಾಗಲಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಗುರುವಾರ ಹೇಳಿದೆ.</p>.<p>ಮಂದಿರ ನಿರ್ಮಾಣಕ್ಕಾಗಿ ನಡೆದ ಭೂಮಿ ಪೂಜೆ ಕಾರ್ಯಕ್ರಮವು ಭಾರತದ ಇತಿಹಾಸದಲ್ಲಿ ಮಹತ್ವದ ತಿರುವು ಎಂದೂ ತಿಳಿಸಿದೆ.</p>.<p>ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸಲು ಆರ್ಎಸ್ಎಸ್ ಬೃಹತ್ ಅಭಿಯಾನವನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ಆರ್ಎಸ್ಎಸ್ ತನ್ನ ಅಂಗಸಂಸ್ಥೆಗಳ ಮೂಲಕ, ಐದು ಲಕ್ಷ ಗ್ರಾಮಗಳ 10 ಕೋಟಿ ಕುಟುಂಬಗಳನ್ನು ಸಂಪರ್ಕಿಸಿಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸಲಿದೆ ಎಂದು ಆರ್ಎಸ್ಎಸ್ನ ಮುಖಂಡರು ತಿಳಿಸಿದ್ದಾರೆ.</p>.<p>ಜಾತಿ ತಾರತಮ್ಯ ತೊಡೆದುಹಾಕಲು, ಹಿಂದೂ ಕುಟುಂಬಗಳ ಮೌಲ್ಯಗಳನ್ನು ಪ್ರಚುರಪಡಿಸಲು ಹಾಗೂ ಪರಿಸರ ಸಂರಕ್ಷಣೆಗೆ ದುಡಿಯಲು ಗಾಂಧಿನಗರದ ಉವರ್ಸಾದ್ ಗ್ರಾಮದಲ್ಲಿ ನಡೆದ ಮೂರು ದಿನಗಳ ‘ಚಿಂತನ್ ಶಿಬಿರ’ದಲ್ಲಿ ಆರ್ಎಸ್ಎಸ್ ನಿರ್ಧರಿಸಿದೆ.</p>.<p>ಶಿಬಿರದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಭಯ್ಯಾಜಿ ಜೋಷಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಸಂಘ ಪರಿವಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುವ 34 ಸಂಘಟನೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಂಧಿನಗರ(ಗುಜರಾತ್): </strong>ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರವು ಭಾರತದ ಸ್ವಾಭಿಮಾನ ಮತ್ತು ಹೆಮ್ಮೆಯ ಸಂಕೇತವಾಗಲಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಗುರುವಾರ ಹೇಳಿದೆ.</p>.<p>ಮಂದಿರ ನಿರ್ಮಾಣಕ್ಕಾಗಿ ನಡೆದ ಭೂಮಿ ಪೂಜೆ ಕಾರ್ಯಕ್ರಮವು ಭಾರತದ ಇತಿಹಾಸದಲ್ಲಿ ಮಹತ್ವದ ತಿರುವು ಎಂದೂ ತಿಳಿಸಿದೆ.</p>.<p>ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸಲು ಆರ್ಎಸ್ಎಸ್ ಬೃಹತ್ ಅಭಿಯಾನವನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ಆರ್ಎಸ್ಎಸ್ ತನ್ನ ಅಂಗಸಂಸ್ಥೆಗಳ ಮೂಲಕ, ಐದು ಲಕ್ಷ ಗ್ರಾಮಗಳ 10 ಕೋಟಿ ಕುಟುಂಬಗಳನ್ನು ಸಂಪರ್ಕಿಸಿಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸಲಿದೆ ಎಂದು ಆರ್ಎಸ್ಎಸ್ನ ಮುಖಂಡರು ತಿಳಿಸಿದ್ದಾರೆ.</p>.<p>ಜಾತಿ ತಾರತಮ್ಯ ತೊಡೆದುಹಾಕಲು, ಹಿಂದೂ ಕುಟುಂಬಗಳ ಮೌಲ್ಯಗಳನ್ನು ಪ್ರಚುರಪಡಿಸಲು ಹಾಗೂ ಪರಿಸರ ಸಂರಕ್ಷಣೆಗೆ ದುಡಿಯಲು ಗಾಂಧಿನಗರದ ಉವರ್ಸಾದ್ ಗ್ರಾಮದಲ್ಲಿ ನಡೆದ ಮೂರು ದಿನಗಳ ‘ಚಿಂತನ್ ಶಿಬಿರ’ದಲ್ಲಿ ಆರ್ಎಸ್ಎಸ್ ನಿರ್ಧರಿಸಿದೆ.</p>.<p>ಶಿಬಿರದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಭಯ್ಯಾಜಿ ಜೋಷಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಸಂಘ ಪರಿವಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುವ 34 ಸಂಘಟನೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>