ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಭಾರತಕ್ಕೆ ವಿಶ್ವಸಂಸ್ಥೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಿದೆ.
ಭಾರತದಲ್ಲಿರುವ ಹಲವು ದೇಶಗಳ ನಿರಾಶ್ರಿತ ಯುವಕ–ಯುವತಿಯರು ಹಾಗೂ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಜತೆಯಾಗಿ ರಾಷ್ಟ್ರಗೀತೆ ಹಾಡಿರುವ ವಿಡಿಯೊವನ್ನು ವಿಶ್ವಸಂಸ್ಥೆಯ ಭಾರತ ಘಟಕ ಟ್ವೀಟ್ ಮಾಡಿದೆ.
‘ನಿಮ್ಮ ದಯೆ, ಪ್ರೀತಿ ಮತ್ತು ಬೆಂಬಲಕ್ಕೆ ನಾವು ಕೃಜ್ಞರು’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಿರಾಶ್ರಿತ ಯುವಕ–ಯುವತಿಯರು ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಜತೆಯಾಗಿ ಭಾರತಕ್ಕೆ ಮತ್ತು ಭಾರತ ಸರ್ಕಾರಕ್ಕೆ ಹೃತ್ಪೂರ್ವಕ ಗೌರವ ಸಲ್ಲಿಸಿದ್ದಾರೆ ಎಂದು ಟ್ವೀಟ್ನಲ್ಲಿ ಹೇಳಲಾಗಿದೆ.