<p><strong>ನವದೆಹಲಿ: </strong>'ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ’ವು ಸಾಮೂಹಿಕ ಆಂದೋಲನವಾಗಿ ಬದಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಆಗಸ್ಟ್ 2 ಮತ್ತು 15 ರ ನಡುವಿನ ಅವಧಿಯಲ್ಲಿ ದೇಶದ ನಾಗರಿಕರು ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಪ್ರೊಫೈಲ್ ಚಿತ್ರವಾಗಿ 'ತಿರಂಗ'ವನ್ನು ಬಳಸುವಂತೆ ಅವರು ಒತ್ತಾಯಿಸಿದ್ದಾರೆ.</p>.<p>ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಭಾನುವಾರ ಮಾತನಾಡಿರುವ ಅವರು, ‘ಆಗಸ್ಟ್ 13 ರಿಂದ 15 ರವರೆಗೆ 'ಸ್ವಾಂತ್ರ್ಯೋತ್ಸವದ ಅಮೃತಮಹೋತ್ಸವದ'ದ ಅಡಿಯಲ್ಲಿ 'ಹರ್ ಘರ್ ತಿರಂಗ' ಎಂಬ ವಿಶೇಷ ಆಂದೋಲನವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>‘ನಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಈ ಆಂದೋಲನವನ್ನು ಮತ್ತಷ್ಟು ವ್ಯಾಪಕವಾಗಿಸೋಣ’ ಎಂದೂ ಅವರು ಕರೆ ನೀಡಿದರು.</p>.<p>ಸಾಮಾಜಿಕ ಮಾಧ್ಯಮಗಳಲ್ಲಿ ಖಾತೆಗಳನ್ನು ಹೊಂದಿರುವವರು ಆಗಸ್ಟ್ 2ರಿಂದ 15 ವರೆಗೆ ತಮ್ಮ ಪ್ರೊಫೈಲ್ ಚಿತ್ರವಾಗಿ ತ್ರಿವರ್ಣ ಧ್ವಜವನ್ನು ಬಳಸಬೇಕು ಎಂದು ಮೋದಿ ಜನರನ್ನು ಒತ್ತಾಯಿಸಿದರು.</p>.<p>ಅಮೃತ ಮಹೋತ್ಸವವು ಸಾಮೂಹಿಕ ಆಂದೋಲನದ ರೂಪ ಪಡೆಯುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದು ಪ್ರಧಾನಿ ಹೇಳಿದರು.</p>.<p>ಈ ಮಹೋತ್ಸವದ ಅಂಗವಾಗಿ ಸಮಾಜದ ಎಲ್ಲಾ ವರ್ಗದ ಜನರು ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.</p>.<p>‘ಭಾರತವು ತನ್ನ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿದಾಗ, ನಾವೆಲ್ಲರೂ ಅದ್ಭುತ ಮತ್ತು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದೇವೆ’ ಎಂದು ಮೋದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>'ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ’ವು ಸಾಮೂಹಿಕ ಆಂದೋಲನವಾಗಿ ಬದಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಆಗಸ್ಟ್ 2 ಮತ್ತು 15 ರ ನಡುವಿನ ಅವಧಿಯಲ್ಲಿ ದೇಶದ ನಾಗರಿಕರು ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಪ್ರೊಫೈಲ್ ಚಿತ್ರವಾಗಿ 'ತಿರಂಗ'ವನ್ನು ಬಳಸುವಂತೆ ಅವರು ಒತ್ತಾಯಿಸಿದ್ದಾರೆ.</p>.<p>ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಭಾನುವಾರ ಮಾತನಾಡಿರುವ ಅವರು, ‘ಆಗಸ್ಟ್ 13 ರಿಂದ 15 ರವರೆಗೆ 'ಸ್ವಾಂತ್ರ್ಯೋತ್ಸವದ ಅಮೃತಮಹೋತ್ಸವದ'ದ ಅಡಿಯಲ್ಲಿ 'ಹರ್ ಘರ್ ತಿರಂಗ' ಎಂಬ ವಿಶೇಷ ಆಂದೋಲನವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>‘ನಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಈ ಆಂದೋಲನವನ್ನು ಮತ್ತಷ್ಟು ವ್ಯಾಪಕವಾಗಿಸೋಣ’ ಎಂದೂ ಅವರು ಕರೆ ನೀಡಿದರು.</p>.<p>ಸಾಮಾಜಿಕ ಮಾಧ್ಯಮಗಳಲ್ಲಿ ಖಾತೆಗಳನ್ನು ಹೊಂದಿರುವವರು ಆಗಸ್ಟ್ 2ರಿಂದ 15 ವರೆಗೆ ತಮ್ಮ ಪ್ರೊಫೈಲ್ ಚಿತ್ರವಾಗಿ ತ್ರಿವರ್ಣ ಧ್ವಜವನ್ನು ಬಳಸಬೇಕು ಎಂದು ಮೋದಿ ಜನರನ್ನು ಒತ್ತಾಯಿಸಿದರು.</p>.<p>ಅಮೃತ ಮಹೋತ್ಸವವು ಸಾಮೂಹಿಕ ಆಂದೋಲನದ ರೂಪ ಪಡೆಯುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದು ಪ್ರಧಾನಿ ಹೇಳಿದರು.</p>.<p>ಈ ಮಹೋತ್ಸವದ ಅಂಗವಾಗಿ ಸಮಾಜದ ಎಲ್ಲಾ ವರ್ಗದ ಜನರು ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.</p>.<p>‘ಭಾರತವು ತನ್ನ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿದಾಗ, ನಾವೆಲ್ಲರೂ ಅದ್ಭುತ ಮತ್ತು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದೇವೆ’ ಎಂದು ಮೋದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>