<p><strong>ಲಖನೌ</strong>: ಸಮಾಜವಾದಿ ಪಕ್ಷದ (ಎಸ್.ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಜೊತೆಗಿದ್ದವರನ್ನು ಮತ್ತು ಮುಸ್ಲಿಂ ಸಮುದಾಯದವರನ್ನು ನಿರ್ಲಕ್ಷಿಸಿದ್ದಾರೆ ಎಂದು ಸೆರೆವಾಸ ಅನುಭವಿಸುತ್ತಿರುವ ಎಸ್.ಪಿ. ನಾಯಕ ಆಜಂ ಖಾನ್ ಅವರ ವಕ್ತಾರ ಫಸಾಹತ್ ಅಲಿ ಖಾನ್ ಆರೋಪಿಸಿದ್ದಾರೆ. </p>.<p>ಎರಡೂವರೆ ವರ್ಷಗಳಲ್ಲಿ ಅಖಿಲೇಶ್ ಯಾದವ್ ಅವರು ಒಂದು ಬಾರಿ ಮಾತ್ರ ಆಜಂ ಖಾನ್ ಅವರನ್ನು ಜೈಲಿನಲ್ಲಿ ಭೇಟಿಯಾಗಿದ್ದಾರೆ. ಅವರ ಬಿಡುಗಡೆಗೆ ಪಕ್ಷವು ಯಾವುದೇ ಪ್ರಯತ್ನ ಮಾಡಿಲ್ಲ ಎಂದೂ ಆರೋಪ ಮಾಡಿದ್ದಾರೆ.</p>.<p>ರಾಮ್ಪುರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕ್ರಮದಲ್ಲಿ ಫಸಾಹತ್ ಅಲಿ ಖಾನ್ ಅವರು ಈ ಹೇಳಿಕೆ ನೀಡಿದ್ದು, ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.</p>.<p>ಅಖಿಲೇಶ್ ಅವರಿಗೆ ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಮತ ಹಾಕಿದ್ದರೂ ಅವರು ಮುಸ್ಲಿಂ ಸಮುದಾಯದ ಪರವಾಗಿ ಒಂದು ಮಾತೂ ಆಡಿಲ್ಲ ಎಂದೂ ಫಸಾಹತ್ ಅಲಿ ಖಾನ್ ಹೇಳಿದ್ದಾರೆ.</p>.<p>ಇದು ನನ್ನ ವೈಯಕ್ತಿಕ ನೋವು ಎಂದಿರುವ ಅವರು, ನಿರ್ಧಾರ ತೆಗೆದುಕೊಳ್ಳಲು ಇದು ಸೂಕ್ತ ಸಮಯ ಎಂದು ಆಜಂ ಖಾನ್ ಅವರಿಗೆ ತಿಳಿಸುವುದಾಗಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಸಮಾಜವಾದಿ ಪಕ್ಷದ (ಎಸ್.ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಜೊತೆಗಿದ್ದವರನ್ನು ಮತ್ತು ಮುಸ್ಲಿಂ ಸಮುದಾಯದವರನ್ನು ನಿರ್ಲಕ್ಷಿಸಿದ್ದಾರೆ ಎಂದು ಸೆರೆವಾಸ ಅನುಭವಿಸುತ್ತಿರುವ ಎಸ್.ಪಿ. ನಾಯಕ ಆಜಂ ಖಾನ್ ಅವರ ವಕ್ತಾರ ಫಸಾಹತ್ ಅಲಿ ಖಾನ್ ಆರೋಪಿಸಿದ್ದಾರೆ. </p>.<p>ಎರಡೂವರೆ ವರ್ಷಗಳಲ್ಲಿ ಅಖಿಲೇಶ್ ಯಾದವ್ ಅವರು ಒಂದು ಬಾರಿ ಮಾತ್ರ ಆಜಂ ಖಾನ್ ಅವರನ್ನು ಜೈಲಿನಲ್ಲಿ ಭೇಟಿಯಾಗಿದ್ದಾರೆ. ಅವರ ಬಿಡುಗಡೆಗೆ ಪಕ್ಷವು ಯಾವುದೇ ಪ್ರಯತ್ನ ಮಾಡಿಲ್ಲ ಎಂದೂ ಆರೋಪ ಮಾಡಿದ್ದಾರೆ.</p>.<p>ರಾಮ್ಪುರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕ್ರಮದಲ್ಲಿ ಫಸಾಹತ್ ಅಲಿ ಖಾನ್ ಅವರು ಈ ಹೇಳಿಕೆ ನೀಡಿದ್ದು, ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.</p>.<p>ಅಖಿಲೇಶ್ ಅವರಿಗೆ ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಮತ ಹಾಕಿದ್ದರೂ ಅವರು ಮುಸ್ಲಿಂ ಸಮುದಾಯದ ಪರವಾಗಿ ಒಂದು ಮಾತೂ ಆಡಿಲ್ಲ ಎಂದೂ ಫಸಾಹತ್ ಅಲಿ ಖಾನ್ ಹೇಳಿದ್ದಾರೆ.</p>.<p>ಇದು ನನ್ನ ವೈಯಕ್ತಿಕ ನೋವು ಎಂದಿರುವ ಅವರು, ನಿರ್ಧಾರ ತೆಗೆದುಕೊಳ್ಳಲು ಇದು ಸೂಕ್ತ ಸಮಯ ಎಂದು ಆಜಂ ಖಾನ್ ಅವರಿಗೆ ತಿಳಿಸುವುದಾಗಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>