ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನಗೆ ತಿಳಿಯದೇ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ: ಶ್ರದ್ಧಾ ಹತ್ಯೆ ಆರೋಪಿ

Last Updated 17 ಡಿಸೆಂಬರ್ 2022, 11:27 IST
ಅಕ್ಷರ ಗಾತ್ರ

ನವದೆಹಲಿ: ಜಾಮೀನು ಅರ್ಜಿ ಸಲ್ಲಿಸುವ ಬಗ್ಗೆ ನನಗೆ ತಿಳಿದಿರಲಿಲ್ಲ ಎಂದು ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಶನಿವಾರ ಸಾಕೇತ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನಾನು ವಕಾಲತುನಾಮೆಗೆ ಮಾತ್ರ ಸಹಿ ಹಾಕಿದ್ದೆ ಎಂದು ಆತ ತಿಳಿಸಿದ್ದಾನೆ.

ಜಾಮೀನು ಅರ್ಜಿಯ ಹಿನ್ನೆಲೆಯಲ್ಲಿ ಅಫ್ತಾಬ್‌ನನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

‘ಜಾಮೀನು ಅರ್ಜಿಯನ್ನು ಅಚಾತುರ್ಯದಿಂದ ಸಲ್ಲಿಸಲಾಗಿದೆ‘ ಎಂದು ಪೂನಾವಾಲಾ ಇಮೇಲ್ ಮೂಲಕ ನ್ಯಾಯಾಲಯಕ್ಕೆ ತಿಳಿಸಿರುವುದಾಗಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವೃಂದಾ ಕುಮಾರಿ ಅವರು ಹೇಳಿದರು.

ಜಾಮೀನು ಅರ್ಜಿ ವಿಚಾರಣೆ ಮುಂದುವರಿಸಬೇಕೇ ಎಂದು ನ್ಯಾಯಾಲಯವು ಅಫ್ತಾಬ್‌ನನ್ನು ಪ್ರಶ್ನೆ ಮಾಡಿತು. ‘ವಕೀಲರೊಂದಿಗೆ ಮಾತನಾಡಿ ನಂತರ ಜಾಮೀನು ಅರ್ಜಿಯನ್ನು ಹಿಂತೆಗೆದುಕೊಳ್ಳುತ್ತೇನೆ’ ಎಂದು ಅಫ್ತಾಬ್‌ ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಅದರಂತೆ ಅರ್ಜಿಯ ವಿಚಾರಣೆಯನ್ನು ಡಿ. 22ಕ್ಕೆ ಮುಂದೂಡಲಾಯಿತು.

ಜಾಮೀನು ಕೋರಿ ಅಫ್ತಾಬ್‌ ಶುಕ್ರವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ.

ನವೆಂಬರ್ 12 ರಂದು ಅತನನ್ನು ಬಂಧಿಸಲಾಗಿತ್ತು. ಡಿಸೆಂಬರ್ 9 ರಂದು ಪೂನಾವಾಲಾ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸಲಾಗಿತ್ತು. ಪ್ರಸ್ತುತ ಆತ ತಿಹಾರ್ ಜೈಲಿನಲ್ಲಿ ಇದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT