<p><strong>ನವದೆಹಲಿ</strong>: ಜಾಮೀನು ಅರ್ಜಿ ಸಲ್ಲಿಸುವ ಬಗ್ಗೆ ನನಗೆ ತಿಳಿದಿರಲಿಲ್ಲ ಎಂದು ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಶನಿವಾರ ಸಾಕೇತ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನಾನು ವಕಾಲತುನಾಮೆಗೆ ಮಾತ್ರ ಸಹಿ ಹಾಕಿದ್ದೆ ಎಂದು ಆತ ತಿಳಿಸಿದ್ದಾನೆ.</p>.<p>ಜಾಮೀನು ಅರ್ಜಿಯ ಹಿನ್ನೆಲೆಯಲ್ಲಿ ಅಫ್ತಾಬ್ನನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.</p>.<p>‘ಜಾಮೀನು ಅರ್ಜಿಯನ್ನು ಅಚಾತುರ್ಯದಿಂದ ಸಲ್ಲಿಸಲಾಗಿದೆ‘ ಎಂದು ಪೂನಾವಾಲಾ ಇಮೇಲ್ ಮೂಲಕ ನ್ಯಾಯಾಲಯಕ್ಕೆ ತಿಳಿಸಿರುವುದಾಗಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವೃಂದಾ ಕುಮಾರಿ ಅವರು ಹೇಳಿದರು.</p>.<p>ಜಾಮೀನು ಅರ್ಜಿ ವಿಚಾರಣೆ ಮುಂದುವರಿಸಬೇಕೇ ಎಂದು ನ್ಯಾಯಾಲಯವು ಅಫ್ತಾಬ್ನನ್ನು ಪ್ರಶ್ನೆ ಮಾಡಿತು. ‘ವಕೀಲರೊಂದಿಗೆ ಮಾತನಾಡಿ ನಂತರ ಜಾಮೀನು ಅರ್ಜಿಯನ್ನು ಹಿಂತೆಗೆದುಕೊಳ್ಳುತ್ತೇನೆ’ ಎಂದು ಅಫ್ತಾಬ್ ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಅದರಂತೆ ಅರ್ಜಿಯ ವಿಚಾರಣೆಯನ್ನು ಡಿ. 22ಕ್ಕೆ ಮುಂದೂಡಲಾಯಿತು.</p>.<p>ಜಾಮೀನು ಕೋರಿ ಅಫ್ತಾಬ್ ಶುಕ್ರವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ.</p>.<p>ನವೆಂಬರ್ 12 ರಂದು ಅತನನ್ನು ಬಂಧಿಸಲಾಗಿತ್ತು. ಡಿಸೆಂಬರ್ 9 ರಂದು ಪೂನಾವಾಲಾ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸಲಾಗಿತ್ತು. ಪ್ರಸ್ತುತ ಆತ ತಿಹಾರ್ ಜೈಲಿನಲ್ಲಿ ಇದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜಾಮೀನು ಅರ್ಜಿ ಸಲ್ಲಿಸುವ ಬಗ್ಗೆ ನನಗೆ ತಿಳಿದಿರಲಿಲ್ಲ ಎಂದು ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಶನಿವಾರ ಸಾಕೇತ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನಾನು ವಕಾಲತುನಾಮೆಗೆ ಮಾತ್ರ ಸಹಿ ಹಾಕಿದ್ದೆ ಎಂದು ಆತ ತಿಳಿಸಿದ್ದಾನೆ.</p>.<p>ಜಾಮೀನು ಅರ್ಜಿಯ ಹಿನ್ನೆಲೆಯಲ್ಲಿ ಅಫ್ತಾಬ್ನನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.</p>.<p>‘ಜಾಮೀನು ಅರ್ಜಿಯನ್ನು ಅಚಾತುರ್ಯದಿಂದ ಸಲ್ಲಿಸಲಾಗಿದೆ‘ ಎಂದು ಪೂನಾವಾಲಾ ಇಮೇಲ್ ಮೂಲಕ ನ್ಯಾಯಾಲಯಕ್ಕೆ ತಿಳಿಸಿರುವುದಾಗಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವೃಂದಾ ಕುಮಾರಿ ಅವರು ಹೇಳಿದರು.</p>.<p>ಜಾಮೀನು ಅರ್ಜಿ ವಿಚಾರಣೆ ಮುಂದುವರಿಸಬೇಕೇ ಎಂದು ನ್ಯಾಯಾಲಯವು ಅಫ್ತಾಬ್ನನ್ನು ಪ್ರಶ್ನೆ ಮಾಡಿತು. ‘ವಕೀಲರೊಂದಿಗೆ ಮಾತನಾಡಿ ನಂತರ ಜಾಮೀನು ಅರ್ಜಿಯನ್ನು ಹಿಂತೆಗೆದುಕೊಳ್ಳುತ್ತೇನೆ’ ಎಂದು ಅಫ್ತಾಬ್ ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಅದರಂತೆ ಅರ್ಜಿಯ ವಿಚಾರಣೆಯನ್ನು ಡಿ. 22ಕ್ಕೆ ಮುಂದೂಡಲಾಯಿತು.</p>.<p>ಜಾಮೀನು ಕೋರಿ ಅಫ್ತಾಬ್ ಶುಕ್ರವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ.</p>.<p>ನವೆಂಬರ್ 12 ರಂದು ಅತನನ್ನು ಬಂಧಿಸಲಾಗಿತ್ತು. ಡಿಸೆಂಬರ್ 9 ರಂದು ಪೂನಾವಾಲಾ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸಲಾಗಿತ್ತು. ಪ್ರಸ್ತುತ ಆತ ತಿಹಾರ್ ಜೈಲಿನಲ್ಲಿ ಇದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>