ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಗುಜರಾತ್ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್ಗೆ ಹಾಜರಾಗಿದ್ದರು. ‘ಇದು ಕೇವಲ ಕಲ್ಲು ಎಸೆತದ ಪ್ರಕರಣವಲ್ಲ. ಅಪರಾಧಿಗಳು ರೈಲಿನ ಬೋಗಿಯ ಚಿಲಕವನ್ನು ಹೊರಗಿನಿಂದ ಹಾಕಿ, ಬೋಗಿಗೆ ಬೆಂಕಿ ಹಚ್ಚಿ ಹಲವು ಪ್ರಯಾಣಿಕರ ಸಾವಿಗೆ ಕಾರಣರಾಗಿದ್ದಾರೆ’ ಎಂದು ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠದ ಎದುರು ಹೇಳಿದರು.