"ನಾವು (ಸಮಾವೇಶದ ನಂತರ) ಮಾತನಾಡುತ್ತ ಕುಳಿತಿದ್ದೆವು. ಅವರು (ಅಡ್ವಾಣಿ) ಬಾಳಾಸಾಹೇಬ್ ಅವರೊಂದಿಗೆ ಏನೋ ಒಂದು ವಿಷಯದ ಕುರಿತು ಚರ್ಚಿಸಬೇಕು ಎಂದು ಹೇಳಿದರು. ನಂತರ ನಾನು ಮತ್ತು ಪ್ರಮೋದ್ (ಮಹಾಜನ್) ಅಲ್ಲಿಂದ ಎದ್ದು ಹೊರಟೆವು. ಮೋದಿಯವರನ್ನು (ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕುವ ಬೇಡಿಕೆ) ಕುರಿತು ಮಾತನಾಡುತ್ತಾ ಅಡ್ವಾಣಿಯವರು ಬಾಳಾಸಾಹೇಬರ ಅಭಿಪ್ರಾಯ ಕೇಳಿದರು. ಮೋದಿಯನ್ನು ಮುಟ್ಟದಂತೆ ಬಾಳಾಸಾಹೇಬರು ಅಡ್ವಾಣಿಯವರಿಗೆ ಹೇಳಿದರು. ಮೋದಿಯನ್ನು ತೆಗೆದುಹಾಕಿದರೆ, (ಬಿಜೆಪಿ) ಗುಜರಾತ್ ಅನ್ನು ಕಳೆದುಕೊಳ್ಳಬೇಕಾಗುತ್ತದೆ ಮತ್ತು ಅದರಿಂದ ಹಿಂದುತ್ವಕ್ಕೂ ಹಾನಿಯಾಗುತ್ತದೆ’ ಎಂದು ಅವರು ಹೇಳಿದ್ದರು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.