ಪ್ರಕರಣದ ಪ್ರಮುಖ ಆರೋಪಿ ಧೀರೇಂದ್ರ ಪ್ರತಾಪ್ ಸಿಂಗ್, ಸ್ಥಳೀಯ ಬಿಜೆಪಿ ಮುಖಂಡ ಹಾಗೂ ಬಿಜೆಪಿ ಮಾಜಿ ಸೈನಿಕರ ಸೆಲ್ನ ಜಿಲ್ಲಾ ಘಟಕದ ಅಧ್ಯಕ್ಷ. ಈತ ಪಡಿತರ ಹಂಚಿಕೆ ವಿಚಾರದಲ್ಲಿ ನಡೆದ ಘರ್ಷಣೆಯಲ್ಲಿ ಜೈಪ್ರಕಾಶ್ ಪಾಲಗ ಗಾಮಾ(46) ಎಂಬುವನಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಈ ಘಟನೆ ಸಂಬಂಧ, ಅವರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಶಾಸಕ ಸುರೇಂದ್ರ ಸಿಂಗ್, ‘ಅವರು ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ‘ ಎಂದು ಸಮರ್ಥಿಸಿಕೊಂಡಿದ್ದರು.