ಅಂಗಡಿಗಳಿಗೆ ಪಡಿತರ ವಿತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಬಲ್ಲಿಯಾ ಜಿಲ್ಲೆಯ ದುರ್ಜನ್ಪುರ ಹಳ್ಳಿಯಲ್ಲಿ ನಡೆದ ಘರ್ಷಣೆಯಲ್ಲಿ, ಸ್ಥಳೀಯ ಪಕ್ಷದ ಮುಖಂಡ ಧೀರೇಂದ್ರ ಪ್ರತಾಪ್ ಸಿಂಗ್, 46 ವರ್ಷದ ವ್ಯಕ್ತಿಯೊಬ್ಬನ ಮೇಲೆ ಗುಂಡು ಹಾರಿಸಿದ. ಘಟನೆಯಲ್ಲಿ ಆ ವ್ಯಕ್ತಿ ಸಾವನ್ನಪ್ಪಿದ. ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಶಾಸಕ ಸುರೇಂದ್ರ ಸಿಂಗ್, ‘ಪರಿಸ್ಥಿತಿ ಕೈ ಮೀರಿತ್ತು. ಹಾಗಾಗಿ ಅವರು ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ‘ ಎಂದು ಧೀರೇಂದ್ರ ಸಿಂಗ್ ಕೃತ್ಯವನ್ನು ಸಮರ್ಥಿಸಿಕೊಂಡಿದ್ದರು.