<p><strong>ಅಮೃತಸರ: </strong>‘ಶೌರ್ಯ ಚಕ್ರ’ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ (62) ಅವರನ್ನು ಅಪರಿಚಿತ ದುಷ್ಕರ್ಮಿಗಳು ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.</p>.<p>ತರನ್ ತಾರನ್ ಭಿಖಿವಿಂಡ್ ಗ್ರಾಮದಲ್ಲಿ ತಮ್ಮ ಮನೆಗೆ ಹೊಂದಿಕೊಂಡಿರುವ ಕಚೇರಿಯಲ್ಲಿದ್ದ ಸಿಂಗ್ ಅವರ ಮೇಲೆ ಮೋಟಾರ್ ಸೈಕಲ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.</p>.<p>ಬಲ್ವಿಂದರ್ ಸಿಂಗ್ ಅವರು ಪಂಜಾಬ್ ರಾಜ್ಯದಲ್ಲಿ ಭಯೋತ್ಪಾದನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಿದ್ದರು. ಈ ಹಿಂದೆ ಅನೇಕಬಾರಿ ಅವರ ಮೇಲೆ ಭಯೋತ್ಪಾದಕರು ಹಲ್ಲೆ ನಡೆಸಿದ್ದರು. ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ಅವರಿಗೆ ಭದ್ರತೆ ಒದಗಿಸಿತ್ತು.</p>.<p>ತರನ್ ತಾರನ್ ಪೊಲೀಸರ ಶಿಫಾರಸಿನ ಮೇರೆಗೆ ರಾಜ್ಯ ಸರ್ಕಾರ ಸಿಂಗ್ ಅವರಿಗೆ ನೀಡಿದ್ದ ಭದ್ರತೆಯನ್ನು ವರ್ಷದ ಹಿಂದೆ ಹಿಂತೆಗೆದುಕೊಂಡಿತ್ತು ಎಂದು ಅವರ ಸಹೋದರ ರಂಚಿತ್ ಹೇಳಿದ್ದಾರೆ. ‘ನಮ್ಮ ಇಡೀ ಕುಟುಂಬ ಭಯೋತ್ಪಾದಕರ ಹಿಟ್ ಲಿಸ್ಟ್ನಲ್ಲಿದೆ’ ಎಂದು ಅವರು ಹೇಳಿದ್ದಾರೆ.</p>.<p>ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದ್ದ ಬಲ್ವಿಂದರ್ ಸಿಂಗ್ ಅವರ ಧೈರ್ಯವನ್ನು ಮೆಚ್ಚಿ ಕೇಂದ್ರ ರಕ್ಷಣಾ ಸಚಿವಾಲಯ 1993ರಲ್ಲಿ ಸಿಂಗ್ ಅವರಿಗೆ ‘ಶೌರ್ಯ ಚಕ್ರ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಸಿಂಗ್ ಅವರ ಧೈರ್ಯ ಮತ್ತು ಸಾಹಸದ ಚಟುವಟಿಕೆಗಳ ಕುರಿತು ಅನೇಕ ಸಾಕ್ಷ್ಯಚಿತ್ರಗಳನ್ನು ನಿರ್ಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮೃತಸರ: </strong>‘ಶೌರ್ಯ ಚಕ್ರ’ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ (62) ಅವರನ್ನು ಅಪರಿಚಿತ ದುಷ್ಕರ್ಮಿಗಳು ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.</p>.<p>ತರನ್ ತಾರನ್ ಭಿಖಿವಿಂಡ್ ಗ್ರಾಮದಲ್ಲಿ ತಮ್ಮ ಮನೆಗೆ ಹೊಂದಿಕೊಂಡಿರುವ ಕಚೇರಿಯಲ್ಲಿದ್ದ ಸಿಂಗ್ ಅವರ ಮೇಲೆ ಮೋಟಾರ್ ಸೈಕಲ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.</p>.<p>ಬಲ್ವಿಂದರ್ ಸಿಂಗ್ ಅವರು ಪಂಜಾಬ್ ರಾಜ್ಯದಲ್ಲಿ ಭಯೋತ್ಪಾದನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಿದ್ದರು. ಈ ಹಿಂದೆ ಅನೇಕಬಾರಿ ಅವರ ಮೇಲೆ ಭಯೋತ್ಪಾದಕರು ಹಲ್ಲೆ ನಡೆಸಿದ್ದರು. ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ಅವರಿಗೆ ಭದ್ರತೆ ಒದಗಿಸಿತ್ತು.</p>.<p>ತರನ್ ತಾರನ್ ಪೊಲೀಸರ ಶಿಫಾರಸಿನ ಮೇರೆಗೆ ರಾಜ್ಯ ಸರ್ಕಾರ ಸಿಂಗ್ ಅವರಿಗೆ ನೀಡಿದ್ದ ಭದ್ರತೆಯನ್ನು ವರ್ಷದ ಹಿಂದೆ ಹಿಂತೆಗೆದುಕೊಂಡಿತ್ತು ಎಂದು ಅವರ ಸಹೋದರ ರಂಚಿತ್ ಹೇಳಿದ್ದಾರೆ. ‘ನಮ್ಮ ಇಡೀ ಕುಟುಂಬ ಭಯೋತ್ಪಾದಕರ ಹಿಟ್ ಲಿಸ್ಟ್ನಲ್ಲಿದೆ’ ಎಂದು ಅವರು ಹೇಳಿದ್ದಾರೆ.</p>.<p>ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದ್ದ ಬಲ್ವಿಂದರ್ ಸಿಂಗ್ ಅವರ ಧೈರ್ಯವನ್ನು ಮೆಚ್ಚಿ ಕೇಂದ್ರ ರಕ್ಷಣಾ ಸಚಿವಾಲಯ 1993ರಲ್ಲಿ ಸಿಂಗ್ ಅವರಿಗೆ ‘ಶೌರ್ಯ ಚಕ್ರ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಸಿಂಗ್ ಅವರ ಧೈರ್ಯ ಮತ್ತು ಸಾಹಸದ ಚಟುವಟಿಕೆಗಳ ಕುರಿತು ಅನೇಕ ಸಾಕ್ಷ್ಯಚಿತ್ರಗಳನ್ನು ನಿರ್ಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>