ಈ ನಡುವೆ ಬಂಡಿ ಕಚೇರಿಯು ವಿಡಿಯೊ ಬಿಡುಗಡೆ ಮಾಡಿದ್ದು, ಇದರಲ್ಲಿ ಹಲ್ಲೆಗೊಳಗಾದ ವಿದ್ಯಾರ್ಥಿ ಘಟನೆ ಬಗ್ಗೆ ಹೇಳಿಕೆ ನೀಡಿದ್ದಾನೆ. ‘ಭಗೀರಥನ ಸ್ನೇಹಿತನ ಸಹೋದರಿಗೆ ಮೆಸೇಜ್ ಕಳುಹಿಸುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ನಾನು ಅಸಭ್ಯವಾಗಿ ಉತ್ತರಿಸಿದೆ. ಆಗ ಅವನು ನನಗೆ ಕಪಾಳ ಮೋಕ್ಷ ಮಾಡಿದ. ಅದನ್ನು ಮರೆತು, ನಾವು ಸ್ನೇಹಿತರಾಗಿದ್ದೇವೆ. ಇದು ಮುಗಿದ ಅಧ್ಯಾಯ’ ಎಂದು ಸಂತ್ರಸ್ತ ವಿದ್ಯಾರ್ಥಿ ಶ್ರೀರಾಮ್ ಹೇಳಿದ್ದಾರೆ.