ಆನ್ಲೈನ್ ಮೂಲಕ ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು. ಇದು ಬಳಿಕ ಸಾಮಾಜಿಕ ಮಾಧ್ಯಮ ಫೇಸ್ಬುಕ್ನಲ್ಲಿ ಪ್ರೇಮಕ್ಕೆ ತಿರುಗಿತ್ತು. ಆದರೆ, ಅಭಿಕ್ ಪಾಸ್ಪೋರ್ಟ್ ಹೊಂದಿರಲಿಲ್ಲ. ಹೀಗಾಗಿ ಬಾಂಗ್ಲಾದೇಶಕ್ಕೆ ತೆರಳುವುದು ಸಾಧ್ಯವಿರಲಿಲ್ಲ. ಕೊನೆಗೆ ದಿಟ್ಟ ನಿರ್ಧಾರ ಕೈಗೊಂಡ ಕೃಷ್ಣಾ ಮಂಡಲ್, ನದಿಯಲ್ಲಿ ಈಜಿಕೊಂಡು ಭಾರತದ ಗಡಿ ದಾಟಿ ಕೋಲ್ಕತ್ತಕ್ಕೆ ತೆರಳುವ ಯೋಜನೆ ರೂಪಿಸಿ ಯಶಸ್ವಿಯಾಗಿದ್ದಾರೆ.