ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿ ಈ ಕುರಿತ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಡಿಎಪಿ ಮಾತ್ರವಲ್ಲದೆ, ರಾಜ್ಯಕ್ಕೆ 10,000 ಟನ್ ಪೊಟ್ಯಾಷ್ ಗೊಬ್ಬರದ ಬೇಡಿಕೆ ಇದೆ. ಅದರ ಪೂರೈಕೆಗೂ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ. ಬೇಡಿಕೆ ಈಡೇರಿಸುವ ಭರವಸೆ ದೊರೆತಿದೆ ಎಂದು ಅವರು ತಿಳಿಸಿದರು.