<p><strong>ಲಖನೌ:</strong> ಸಮಾಜವಾದಿ ಪಕ್ಷದ (ಎಸ್ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಬುಧವಾರ ಬಿಜೆಪಿ ಸೇರಿದ್ದಾರೆ. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಅಪರ್ಣಾ ಯಾದವ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.</p>.<p>ಅಪರ್ಣಾ ಅವರು ಕೇಸರಿ ಪಕ್ಷಕ್ಕೆ ಸೇರಿರುವ ಬಗ್ಗೆ ಪ್ರತಿಕ್ರಿಯಿಸಲು ಕೇಳಿದಾಗ 'ನಾನು ಅವರಿಗೆ ಶುಭ ಹಾರೈಸುತ್ತೇನೆ. ಮುಲಾಯಂ ಸಿಂಗ್ ಯಾದವ್ ಅವರು ಆಕೆಯ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದ್ದರು. ಆದರೆ ಅವರು ತಮಗಿಷ್ಟ ಬಂದಂತೆ ಮಾಡಿದ್ದಾರೆ' ಎಂದು ಹೇಳಿದರು.</p>.<p>ಎಸ್ಪಿ ಟಿಕೆಟ್ ನಿರಾಕರಿಸಿದ್ದರಿಂದ ಅಪರ್ಣಾ ಬಿಜೆಪಿ ಸೇರಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್, 'ನಾವು ಇನ್ನೂ ಎಲ್ಲಾ ಟಿಕೆಟ್ಗಳನ್ನು ನೀಡಿಲ್ಲ, ಟಿಕೆಟ್ ನೀಡುವ ನಿರ್ಧಾರವು ನಮ್ಮ ಆಂತರಿಕ ಸಮೀಕ್ಷೆಯನ್ನು ಅವಲಂಬಿಸಿರುತ್ತದೆ' ಎಂದು ಹೇಳಿದರು.</p>.<p>ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್, 'ನಾನು ಅಜಂಗಡದಲ್ಲಿನ ಜನರ ಅನುಮತಿಯನ್ನು ಪಡೆದುಕೊಳ್ಳುತ್ತೇನೆ. ನಂತರ ಅಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ' ಎಂದು ಹೇಳಿದರು</p>.<p>ಮೂಲಗಳ ಪ್ರಕಾರ, ಅಖಿಲೇಶ್ ಅವರು ತಮ್ಮ ಸಂಸದೀಯ ಕ್ಷೇತ್ರವೂ ಆಗಿರುವ ಅಜಂಗಡದ ಗೋಪಾಲ್ಪುರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.</p>.<p>ಈಮಧ್ಯೆ, ಅಖಿಲೇಶ್ ಅವರ ಪಕ್ಷ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರಿಗೆ ಈ ಹಿಂದೆ ನೀಡುತ್ತಿದ್ದ ಸಮಾಜವಾದಿ ಪಿಂಚಣಿಯನ್ನು ವರ್ಷಕ್ಕೆ ₹ 6,000 ದಿಂದ ₹ 18,000 ಕ್ಕೆ ಅಂದರೆ ಮೂರು ಪಟ್ಟು ಹೆಚ್ಚಿಸುವುದಾಗಿ ಬುಧವಾರ ಘೋಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಸಮಾಜವಾದಿ ಪಕ್ಷದ (ಎಸ್ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಬುಧವಾರ ಬಿಜೆಪಿ ಸೇರಿದ್ದಾರೆ. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಅಪರ್ಣಾ ಯಾದವ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.</p>.<p>ಅಪರ್ಣಾ ಅವರು ಕೇಸರಿ ಪಕ್ಷಕ್ಕೆ ಸೇರಿರುವ ಬಗ್ಗೆ ಪ್ರತಿಕ್ರಿಯಿಸಲು ಕೇಳಿದಾಗ 'ನಾನು ಅವರಿಗೆ ಶುಭ ಹಾರೈಸುತ್ತೇನೆ. ಮುಲಾಯಂ ಸಿಂಗ್ ಯಾದವ್ ಅವರು ಆಕೆಯ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದ್ದರು. ಆದರೆ ಅವರು ತಮಗಿಷ್ಟ ಬಂದಂತೆ ಮಾಡಿದ್ದಾರೆ' ಎಂದು ಹೇಳಿದರು.</p>.<p>ಎಸ್ಪಿ ಟಿಕೆಟ್ ನಿರಾಕರಿಸಿದ್ದರಿಂದ ಅಪರ್ಣಾ ಬಿಜೆಪಿ ಸೇರಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್, 'ನಾವು ಇನ್ನೂ ಎಲ್ಲಾ ಟಿಕೆಟ್ಗಳನ್ನು ನೀಡಿಲ್ಲ, ಟಿಕೆಟ್ ನೀಡುವ ನಿರ್ಧಾರವು ನಮ್ಮ ಆಂತರಿಕ ಸಮೀಕ್ಷೆಯನ್ನು ಅವಲಂಬಿಸಿರುತ್ತದೆ' ಎಂದು ಹೇಳಿದರು.</p>.<p>ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್, 'ನಾನು ಅಜಂಗಡದಲ್ಲಿನ ಜನರ ಅನುಮತಿಯನ್ನು ಪಡೆದುಕೊಳ್ಳುತ್ತೇನೆ. ನಂತರ ಅಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ' ಎಂದು ಹೇಳಿದರು</p>.<p>ಮೂಲಗಳ ಪ್ರಕಾರ, ಅಖಿಲೇಶ್ ಅವರು ತಮ್ಮ ಸಂಸದೀಯ ಕ್ಷೇತ್ರವೂ ಆಗಿರುವ ಅಜಂಗಡದ ಗೋಪಾಲ್ಪುರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.</p>.<p>ಈಮಧ್ಯೆ, ಅಖಿಲೇಶ್ ಅವರ ಪಕ್ಷ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರಿಗೆ ಈ ಹಿಂದೆ ನೀಡುತ್ತಿದ್ದ ಸಮಾಜವಾದಿ ಪಿಂಚಣಿಯನ್ನು ವರ್ಷಕ್ಕೆ ₹ 6,000 ದಿಂದ ₹ 18,000 ಕ್ಕೆ ಅಂದರೆ ಮೂರು ಪಟ್ಟು ಹೆಚ್ಚಿಸುವುದಾಗಿ ಬುಧವಾರ ಘೋಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>