<p><strong>ನವದೆಹಲಿ: </strong>ಟ್ಯಾನರಿ ರಸ್ತೆಯಲ್ಲಿನ ಕಸಾಯಿಖಾನೆ ಬಳಿ ಇರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು (ಇಟಿಪಿ) ಮೇಲ್ದರ್ಜೆಗೇರಿಸಲಾಗುವುದು. ಕಸಾಯಿಖಾನೆಯ ತ್ಯಾಜ್ಯ ಹಲಸೂರು ಕೆರೆ ಸೇರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್ಜಿಟಿ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ.</p>.<p>‘ಇಟಿಪಿಯನ್ನು ಮೇಲ್ದರ್ಜೆಗೇರಿಸುವ ಕಾರ್ಯ ಪೂರ್ಣಗೊಂಡ ಬಳಿಕ ತ್ಯಾಜ್ಯ ನೀರು ನೇರವಾಗಿ ಶುದ್ಧೀಕರಣ ಘಟಕವನ್ನು ಸೇರುವುದು. ಇದರಿಂದ ಯಾವುದೇ ತ್ಯಾಜ್ಯ ಇಟಿಪಿಯಲ್ಲಿ ಶೇಖರಣೆಯಾಗುವುದಿಲ್ಲ’ ಎಂದು ನ್ಯಾಯಮಂಡಳಿಯ ದಕ್ಷಿಣ ಪೀಠಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಬಿಬಿಎಂಪಿ ಆಯುಕ್ತ ಗೌರವ ಗುಪ್ತ ತಿಳಿಸಿದ್ದಾರೆ.</p>.<p>‘ಟ್ಯಾನರಿ ರಸ್ತೆಯಲ್ಲಿರುವ ಕಸಾಯಿಖಾನೆ ಹಾಗೂ 50 ಕೆಎಲ್ಡಿ ಸಾಮರ್ಥ್ಯದ ಇಟಿಪಿ ಘಟಕದ ಕಾರ್ಯಾರಂಭಕ್ಕಾಗಿ ಪರವಾನಗಿ ನವೀಕರಣ ಅಗತ್ಯವಿದ್ದು, ಈ ಸಂಬಂಧ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅರ್ಜಿ ಸಲ್ಲಿಸಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.</p>.<p>ಒಳಚರಂಡಿ ಹಾಗೂ ತ್ಯಾಜ್ಯಗಳು ಹಲಸೂರು ಕೆರೆಗೆ ಸೇರುತ್ತಿರುವ ಕಾರಣ, ಕೆರೆ ನೀರು ಕಲುಷಿತಗೊಳ್ಳುತ್ತಿದೆ ಎಂಬ ಬಗ್ಗೆ ಎನ್ಜಿಟಿಯ ದಕ್ಷಿಣ ಪೀಠವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಟ್ಯಾನರಿ ರಸ್ತೆಯಲ್ಲಿನ ಕಸಾಯಿಖಾನೆ ಬಳಿ ಇರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು (ಇಟಿಪಿ) ಮೇಲ್ದರ್ಜೆಗೇರಿಸಲಾಗುವುದು. ಕಸಾಯಿಖಾನೆಯ ತ್ಯಾಜ್ಯ ಹಲಸೂರು ಕೆರೆ ಸೇರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್ಜಿಟಿ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ.</p>.<p>‘ಇಟಿಪಿಯನ್ನು ಮೇಲ್ದರ್ಜೆಗೇರಿಸುವ ಕಾರ್ಯ ಪೂರ್ಣಗೊಂಡ ಬಳಿಕ ತ್ಯಾಜ್ಯ ನೀರು ನೇರವಾಗಿ ಶುದ್ಧೀಕರಣ ಘಟಕವನ್ನು ಸೇರುವುದು. ಇದರಿಂದ ಯಾವುದೇ ತ್ಯಾಜ್ಯ ಇಟಿಪಿಯಲ್ಲಿ ಶೇಖರಣೆಯಾಗುವುದಿಲ್ಲ’ ಎಂದು ನ್ಯಾಯಮಂಡಳಿಯ ದಕ್ಷಿಣ ಪೀಠಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಬಿಬಿಎಂಪಿ ಆಯುಕ್ತ ಗೌರವ ಗುಪ್ತ ತಿಳಿಸಿದ್ದಾರೆ.</p>.<p>‘ಟ್ಯಾನರಿ ರಸ್ತೆಯಲ್ಲಿರುವ ಕಸಾಯಿಖಾನೆ ಹಾಗೂ 50 ಕೆಎಲ್ಡಿ ಸಾಮರ್ಥ್ಯದ ಇಟಿಪಿ ಘಟಕದ ಕಾರ್ಯಾರಂಭಕ್ಕಾಗಿ ಪರವಾನಗಿ ನವೀಕರಣ ಅಗತ್ಯವಿದ್ದು, ಈ ಸಂಬಂಧ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅರ್ಜಿ ಸಲ್ಲಿಸಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.</p>.<p>ಒಳಚರಂಡಿ ಹಾಗೂ ತ್ಯಾಜ್ಯಗಳು ಹಲಸೂರು ಕೆರೆಗೆ ಸೇರುತ್ತಿರುವ ಕಾರಣ, ಕೆರೆ ನೀರು ಕಲುಷಿತಗೊಳ್ಳುತ್ತಿದೆ ಎಂಬ ಬಗ್ಗೆ ಎನ್ಜಿಟಿಯ ದಕ್ಷಿಣ ಪೀಠವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>