<p><strong>ನವದೆಹಲಿ:</strong> ಕೋವಿಡ್-19 ಮೂರನೇ ಅಲೆಯನ್ನು ಗಮನದಲ್ಲಿಟ್ಟುಕೊಂಡು ಸಣ್ಣ ಮತ್ತು ಮಧ್ಯಮ ಗಾತ್ರದ ಆಸ್ಪತ್ರೆಗಳು ಆಮ್ಲಜನಕ ಪೂರೈಕೆ ಮತ್ತು ಇತರ ವೈದ್ಯಕೀಯ ಸೌಲಭ್ಯಗಳಲ್ಲಿ ಸ್ವಾವಲಂಬಿಯಾಗಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.</p>.<p>'ಮಹಾರಾಷ್ಟ್ರ ಬಿಜೆಪಿ ವೈದ್ಯಕೀಯ ಘಟಕ' ಆಯೋಜಿಸಿದ್ದ ಕೋವಿಡ್-19 ಕುರಿತಾದ ವೆಬಿನಾರ್ನಲ್ಲಿ ವೈದ್ಯರನ್ನು ಉದ್ದೇಶಿಸಿ ಮಾತನಾಡಿ, 'ಆಮ್ಲಜನಕದ ಪೂರೈಕೆಯು ಒಂದು ನಿರ್ಣಾಯಕ ವಿಷಯವಾಗಿದೆ ಮತ್ತು ಈ ವಿಚಾರದಲ್ಲಿ ನಾವು ಸ್ವಾವಲಂಬಿಯಾಗಬೇಕು. 50ಕ್ಕೂ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳು ಆಮ್ಲಜನಕ ಪೂರೈಕೆಯಲ್ಲಿ ಸ್ವಾವಲಂಬಿಯಾಗಬೇಕು. ಎಲ್ಲಾ ಜಿಲ್ಲೆಗಳಲ್ಲಿ ಆಮ್ಲಜನಕ ಟ್ಯಾಂಕರ್ ಲಭ್ಯವಾಗುವಂತೆ ಮಾಡಬೇಕು' ಎಂದು ಅವರು ಹೇಳಿದರು.</p>.<p>ಸಂಭವನೀಯ ಮೂರನೇ ಅಲೆಯನ್ನು ನಿಭಾಯಿಸಲು ಪ್ರತಿ ಜಿಲ್ಲೆಯು ತಕ್ಷಣದ, ಮಧ್ಯಂತರ ಮತ್ತು ದೀರ್ಘಕಾಲೀನ ಕ್ರಿಯಾ ಯೋಜನೆಯನ್ನು ಹೊಂದಬೇಕು. ಪ್ರತಿ ಜಿಲ್ಲೆಯಲ್ಲಿಯೂ 4,000 ರಿಂದ 5,000 ಹೆಚ್ಚುವರಿ ಆಮ್ಲಜನಕ ಸಿಲಿಂಡರ್ಗಳನ್ನು ಹೊಂದಿರಬೇಕು. ಆಸ್ಪತ್ರೆಗಳು ಸದ್ಯ ಹೊಂದಿರುವ ಹಾಸಿಗೆ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.</p>.<p>'ಪ್ರತಿ ಆಸ್ಪತ್ರೆಯು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎರಡರಿಂದ ನಾಲ್ಕು ದಿನಗಳಲ್ಲಿ ದಿನಗಳಲ್ಲಿ ಹಾಸಿಗೆಯ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಿಕೊಳ್ಳಬೇಕು ಎಂಬುದನ್ನು ಯೋಜಿಸಬೇಕು. ಅದೇ ರೀತಿ, 50 ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳು ಕನಿಷ್ಠ ಐದರಿಂದ ಏಳು ವೆಂಟಿಲೇಟರ್ ಹಾಸಿಗೆಗಳನ್ನು ಹೊಂದಿರಬೇಕು' ಎಂದು ಅವರು ಹೇಳಿದರು.</p>.<p>ಸಮಾಜದೆಡೆಗೆ ಕೆಲಸ ಮಾಡಿ, ಅದುವೆ ನಿಜವಾದ ಸಾಮಾಜಿಕ ಕಾರ್ಯ ಮತ್ತು ರಾಷ್ಟ್ರೀಯತೆ ಎಂದು 'ಮಹಾರಾಷ್ಟ್ರ ಬಿಜೆಪಿ ವೈದ್ಯಕೀಯ ಘಟಕ'ದ ಸದ್ಯರಿಗೆ ಕರೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್-19 ಮೂರನೇ ಅಲೆಯನ್ನು ಗಮನದಲ್ಲಿಟ್ಟುಕೊಂಡು ಸಣ್ಣ ಮತ್ತು ಮಧ್ಯಮ ಗಾತ್ರದ ಆಸ್ಪತ್ರೆಗಳು ಆಮ್ಲಜನಕ ಪೂರೈಕೆ ಮತ್ತು ಇತರ ವೈದ್ಯಕೀಯ ಸೌಲಭ್ಯಗಳಲ್ಲಿ ಸ್ವಾವಲಂಬಿಯಾಗಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.</p>.<p>'ಮಹಾರಾಷ್ಟ್ರ ಬಿಜೆಪಿ ವೈದ್ಯಕೀಯ ಘಟಕ' ಆಯೋಜಿಸಿದ್ದ ಕೋವಿಡ್-19 ಕುರಿತಾದ ವೆಬಿನಾರ್ನಲ್ಲಿ ವೈದ್ಯರನ್ನು ಉದ್ದೇಶಿಸಿ ಮಾತನಾಡಿ, 'ಆಮ್ಲಜನಕದ ಪೂರೈಕೆಯು ಒಂದು ನಿರ್ಣಾಯಕ ವಿಷಯವಾಗಿದೆ ಮತ್ತು ಈ ವಿಚಾರದಲ್ಲಿ ನಾವು ಸ್ವಾವಲಂಬಿಯಾಗಬೇಕು. 50ಕ್ಕೂ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳು ಆಮ್ಲಜನಕ ಪೂರೈಕೆಯಲ್ಲಿ ಸ್ವಾವಲಂಬಿಯಾಗಬೇಕು. ಎಲ್ಲಾ ಜಿಲ್ಲೆಗಳಲ್ಲಿ ಆಮ್ಲಜನಕ ಟ್ಯಾಂಕರ್ ಲಭ್ಯವಾಗುವಂತೆ ಮಾಡಬೇಕು' ಎಂದು ಅವರು ಹೇಳಿದರು.</p>.<p>ಸಂಭವನೀಯ ಮೂರನೇ ಅಲೆಯನ್ನು ನಿಭಾಯಿಸಲು ಪ್ರತಿ ಜಿಲ್ಲೆಯು ತಕ್ಷಣದ, ಮಧ್ಯಂತರ ಮತ್ತು ದೀರ್ಘಕಾಲೀನ ಕ್ರಿಯಾ ಯೋಜನೆಯನ್ನು ಹೊಂದಬೇಕು. ಪ್ರತಿ ಜಿಲ್ಲೆಯಲ್ಲಿಯೂ 4,000 ರಿಂದ 5,000 ಹೆಚ್ಚುವರಿ ಆಮ್ಲಜನಕ ಸಿಲಿಂಡರ್ಗಳನ್ನು ಹೊಂದಿರಬೇಕು. ಆಸ್ಪತ್ರೆಗಳು ಸದ್ಯ ಹೊಂದಿರುವ ಹಾಸಿಗೆ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.</p>.<p>'ಪ್ರತಿ ಆಸ್ಪತ್ರೆಯು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎರಡರಿಂದ ನಾಲ್ಕು ದಿನಗಳಲ್ಲಿ ದಿನಗಳಲ್ಲಿ ಹಾಸಿಗೆಯ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಿಕೊಳ್ಳಬೇಕು ಎಂಬುದನ್ನು ಯೋಜಿಸಬೇಕು. ಅದೇ ರೀತಿ, 50 ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳು ಕನಿಷ್ಠ ಐದರಿಂದ ಏಳು ವೆಂಟಿಲೇಟರ್ ಹಾಸಿಗೆಗಳನ್ನು ಹೊಂದಿರಬೇಕು' ಎಂದು ಅವರು ಹೇಳಿದರು.</p>.<p>ಸಮಾಜದೆಡೆಗೆ ಕೆಲಸ ಮಾಡಿ, ಅದುವೆ ನಿಜವಾದ ಸಾಮಾಜಿಕ ಕಾರ್ಯ ಮತ್ತು ರಾಷ್ಟ್ರೀಯತೆ ಎಂದು 'ಮಹಾರಾಷ್ಟ್ರ ಬಿಜೆಪಿ ವೈದ್ಯಕೀಯ ಘಟಕ'ದ ಸದ್ಯರಿಗೆ ಕರೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>