<p><strong>ಪಟ್ನಾ:</strong> ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಪಕ್ಷವು ಮೈತ್ರಿ ಮಾಡಿಕೊಳ್ಳಲು ಸಿದ್ಧವಿದೆ ಎಂಬ ಸುಳಿವನ್ನು ಆರ್ಜೆಡಿ ಮುಖ್ಯಸ್ಥ ಲಾಲುಪ್ರಸಾದ್ ಬುಧವಾರ ನೀಡಿದರು.</p>.<p>ಬಿಹಾರದ ತಾರಾಪುರ ಹಾಗೂ ಕುಶೇಶ್ವರ ಆಸ್ತಾನ ವಿಧಾನಸಭಾ ಕ್ಷೇತ್ರಗಳಿಗೆ ಇದೇ 30 ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಅವರು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದೆ. ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳ ಮೈತ್ರಿ ಅಗತ್ಯ. ಕೂಡಲೇ ಇಂಥ ಪಕ್ಷಗಳ ಸಭೆ ಕರೆಯುವಂತೆ ಅವರಿಗೆ ಮನವಿ ಮಾಡಿದೆ’ ಎಂದು ಲಾಲುಪ್ರಸಾದ್ ಹೇಳಿದರು.</p>.<p>‘ನೀವು ರಾಷ್ಟ್ರವ್ಯಾಪಿ ಬೆಂಬಲ ಹೊಂದಿರುವ ಪಕ್ಷವೊಂದರ ನಾಯಕಿಯಾಗಿದ್ದೀರಿ. ಬಿಜೆಪಿ ವಿರೋಧಿಸುವ ಸಮಾನ ಮನಸ್ಕ ಪಕ್ಷಗಳ ಸಭೆಯನ್ನು ನೀವೇ ಆಯೋಜಿಸಬೇಕು ಎಂಬುದಾಗಿ ಸೋನಿಯಾ ಗಾಂಧಿಯವರಿಗೆ ನಾನು ಹೇಳಿದೆ’ ಎಂದೂ ತಿಳಿಸಿದರು.</p>.<p>ಇತ್ತೀಚಿಗೆ ಕಾಂಗ್ರೆಸ್ ಹಾಗೂ ಆರ್ಜೆಡಿ ನಡುವಿನ ಸಂಬಂಧ ಉತ್ತಮವಾಗಿಲ್ಲ. ಉಪಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ಏಕಾಂಗಿಯಾಗಿಯೇ ಸ್ಪರ್ಧಿಸುವುದಾಗಿ ಆರ್ಜೆಡಿ ಘೋಷಿಸಿದ ನಂತರ ಉಭಯ ಪಕ್ಷಗಳ ಸಂಬಂಧ ಮತ್ತಷ್ಟೂ ಹಳಸಿದೆ. ಇಂಥ ಸಂದರ್ಭದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲುಪ್ರಸಾದ್ ಅವರ ಈ ಹೇಳಿಕೆಗೆ ಮಹತ್ವ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಪಕ್ಷವು ಮೈತ್ರಿ ಮಾಡಿಕೊಳ್ಳಲು ಸಿದ್ಧವಿದೆ ಎಂಬ ಸುಳಿವನ್ನು ಆರ್ಜೆಡಿ ಮುಖ್ಯಸ್ಥ ಲಾಲುಪ್ರಸಾದ್ ಬುಧವಾರ ನೀಡಿದರು.</p>.<p>ಬಿಹಾರದ ತಾರಾಪುರ ಹಾಗೂ ಕುಶೇಶ್ವರ ಆಸ್ತಾನ ವಿಧಾನಸಭಾ ಕ್ಷೇತ್ರಗಳಿಗೆ ಇದೇ 30 ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಅವರು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದೆ. ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳ ಮೈತ್ರಿ ಅಗತ್ಯ. ಕೂಡಲೇ ಇಂಥ ಪಕ್ಷಗಳ ಸಭೆ ಕರೆಯುವಂತೆ ಅವರಿಗೆ ಮನವಿ ಮಾಡಿದೆ’ ಎಂದು ಲಾಲುಪ್ರಸಾದ್ ಹೇಳಿದರು.</p>.<p>‘ನೀವು ರಾಷ್ಟ್ರವ್ಯಾಪಿ ಬೆಂಬಲ ಹೊಂದಿರುವ ಪಕ್ಷವೊಂದರ ನಾಯಕಿಯಾಗಿದ್ದೀರಿ. ಬಿಜೆಪಿ ವಿರೋಧಿಸುವ ಸಮಾನ ಮನಸ್ಕ ಪಕ್ಷಗಳ ಸಭೆಯನ್ನು ನೀವೇ ಆಯೋಜಿಸಬೇಕು ಎಂಬುದಾಗಿ ಸೋನಿಯಾ ಗಾಂಧಿಯವರಿಗೆ ನಾನು ಹೇಳಿದೆ’ ಎಂದೂ ತಿಳಿಸಿದರು.</p>.<p>ಇತ್ತೀಚಿಗೆ ಕಾಂಗ್ರೆಸ್ ಹಾಗೂ ಆರ್ಜೆಡಿ ನಡುವಿನ ಸಂಬಂಧ ಉತ್ತಮವಾಗಿಲ್ಲ. ಉಪಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ಏಕಾಂಗಿಯಾಗಿಯೇ ಸ್ಪರ್ಧಿಸುವುದಾಗಿ ಆರ್ಜೆಡಿ ಘೋಷಿಸಿದ ನಂತರ ಉಭಯ ಪಕ್ಷಗಳ ಸಂಬಂಧ ಮತ್ತಷ್ಟೂ ಹಳಸಿದೆ. ಇಂಥ ಸಂದರ್ಭದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲುಪ್ರಸಾದ್ ಅವರ ಈ ಹೇಳಿಕೆಗೆ ಮಹತ್ವ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>