ಕೋಲ್ಕತ್ತ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ಸುಮನ್ ಕಾಂಜೀಲಾಲ್ ಅವರು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ (ಟಿಎಂಸಿ) ಭಾನುವಾರ ಇಲ್ಲಿ ಸೇರ್ಪಡೆಗೊಂಡರು.
‘ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಪಕ್ಷದ ಧ್ವಜವನ್ನು ಕಾಂಜೀಲಾಲ್ ಅವರಿಗೆ ಹಸ್ತಾಂತರಿಸುವ ಮೂಲಕ ಬರಮಾಡಿಕೊಂಡರು’ ಎಂದು ಟಿಎಂಸಿ ಹೇಳಿಕೆ ನೀಡಿದೆ. ರಾಜ್ಯದಲ್ಲಿ ಪಂಚಾಯಿತಿ ಚುನಾವಣೆ ಸಮೀಪಿಸುತ್ತಿರುವಾಗಲೇ ಕಾಂಜೀಲಾಲ್ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ವಕ್ತಾರ ಸಮಿಕ್ ಭಟ್ಟಾಚಾರ್ಯ ಅವರು, ‘ಕಾಂಜೀಲಾಲ್ ಹೊರಹೋಗಿರುವುದು ಪಕ್ಷದ ಮೇಲೆ ಪ್ರಭಾವ ಬೀರುವುದಿಲ್ಲ’ ಎಂದು ಹೇಳಿದರು.