ಕೋಲ್ಕತ್ತ: ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯನ್ನು ನಿಯಂತ್ರಿಸಲು ಪಶ್ಚಿಮ ಬಂಗಾಳದಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಲಾಗಿದೆ.
ಪರಿಸ್ಥಿತಿ ಸುಧಾರಿಸಿರುವ ಕಾರಣ ಜೂನ್ 16ರಿಂದ ಶೇಕಡಾ 25ರಷ್ಟು ಉದ್ಯೋಗಿಗಳ ಸಾಮರ್ಥ್ಯದೊಂದಿಗೆಕಚೇರಿ ತೆರೆದುಕೊಳ್ಳಲು ಅವಕಾಶ ಮಾಡಿಕೊಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ಆದೇಶದ ವರೆಗೆ ಸಾರ್ವಜನಿಕ ಸಾರಿಗೆ ಸೇವೆಗಳ ಮೇಲಿನ ನಿರ್ಬಂಧಗಳು ಮುಂದುವರಿಯುವುದರಿಂದ ಕಂಪನಿಗಳು ಉದ್ಯೋಗಿಗಳ ಸಂಚಾರಕ್ಕೆವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿ ಎಚ್.ಕೆ. ದ್ವಿವೇದಿ ತಿಳಿಸಿದ್ದಾರೆ.