<p><strong>ಕೋಲ್ಕತ್ತ</strong>: ಕೋವಿಡ್ ಮೂರನೇ ಅಲೆ ಕುರಿತು ತಜ್ಞರು ನೀಡಿರುವ ಎಚ್ಚರಿಕೆಯನ್ನು ಆಧರಿಸಿ, ಪಶ್ಚಿಮ ಬಂಗಾಳ ಸರ್ಕಾರವು ಸದ್ಯ ಜಾರಿಯಲ್ಲಿರುವ ನಿರ್ಬಂಧಗಳನ್ನು ಆಗಸ್ಟ್ 15ರವರೆಗೆ ವಿಸ್ತರಿಸಿದೆ. ಆದರೆ, ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ.</p>.<p>ಕಳೆದ ಮೇ 16ರಂದು ಕೋವಿಡ್ ನಿರ್ಬಂಧಗಳನ್ನು ಜಾರಿಗೊಳಿಸಿದ್ದು, ಅದನ್ನು ಜುಲೈ 30ರವರೆಗೆ ಮುಂದುವರಿಸಲಾಗಿತ್ತು.</p>.<p>ಹೊಸ ಆದೇಶದ ಪ್ರಕಾರ, ಶೇ 50ರಷ್ಟು ಜನರೊಂದಿಗೆ ಒಳಾಂಗಣದಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಶೇ 50ರಷ್ಟು ಪ್ರಯಾಣಿಕರೊಂದಿಗೆಬಸ್, ಟ್ಯಾಕ್ಸಿ, ಆಟೊರಿಕ್ಷಾಗಳು ಸಂಚರಿಸಬಹುದು. ಅರ್ಧದಷ್ಟು ಸಿಬ್ಬಂದಿಯೊಂದಿಗೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಕಾರ್ಯನಿರ್ವಹಿಸಬಹುದು.</p>.<p>‘ಕೋವಿಡ್ ಹೊಸ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು, ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ– 2005ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ‘ ಎಂದು ಸರ್ಕಾರ ಎಚ್ಚರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಕೋವಿಡ್ ಮೂರನೇ ಅಲೆ ಕುರಿತು ತಜ್ಞರು ನೀಡಿರುವ ಎಚ್ಚರಿಕೆಯನ್ನು ಆಧರಿಸಿ, ಪಶ್ಚಿಮ ಬಂಗಾಳ ಸರ್ಕಾರವು ಸದ್ಯ ಜಾರಿಯಲ್ಲಿರುವ ನಿರ್ಬಂಧಗಳನ್ನು ಆಗಸ್ಟ್ 15ರವರೆಗೆ ವಿಸ್ತರಿಸಿದೆ. ಆದರೆ, ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ.</p>.<p>ಕಳೆದ ಮೇ 16ರಂದು ಕೋವಿಡ್ ನಿರ್ಬಂಧಗಳನ್ನು ಜಾರಿಗೊಳಿಸಿದ್ದು, ಅದನ್ನು ಜುಲೈ 30ರವರೆಗೆ ಮುಂದುವರಿಸಲಾಗಿತ್ತು.</p>.<p>ಹೊಸ ಆದೇಶದ ಪ್ರಕಾರ, ಶೇ 50ರಷ್ಟು ಜನರೊಂದಿಗೆ ಒಳಾಂಗಣದಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಶೇ 50ರಷ್ಟು ಪ್ರಯಾಣಿಕರೊಂದಿಗೆಬಸ್, ಟ್ಯಾಕ್ಸಿ, ಆಟೊರಿಕ್ಷಾಗಳು ಸಂಚರಿಸಬಹುದು. ಅರ್ಧದಷ್ಟು ಸಿಬ್ಬಂದಿಯೊಂದಿಗೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಕಾರ್ಯನಿರ್ವಹಿಸಬಹುದು.</p>.<p>‘ಕೋವಿಡ್ ಹೊಸ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು, ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ– 2005ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ‘ ಎಂದು ಸರ್ಕಾರ ಎಚ್ಚರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>