ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ದಿಲೀಪ್ ಘೋಷ್

ಕೋಲ್ಕತ್ತ: ಪಶ್ಚಿಮ ಬಂಗಾಳ ‘ಎರಡನೇ ಕಾಶ್ಮೀರವಾಗಿ’ ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಅವರು ಹೇಳಿದರು.
ಬೀರ್ಭೂಮ್ ಜಿಲ್ಲೆಯಲ್ಲಿ ಬುಧವಾರ ‘ಚಹಾ–ಚಕ್ರ’ ಕಾರ್ಯಕ್ರಮದಲ್ಲಿ ಮಾತನಾಡಿದ ದಿಲೀಪ್ ಘೋಷ್, ಪಶ್ಚಿಮ ಬಂಗಾಳದಲ್ಲಿ ಬಾಂಬ್ ತಯಾರಿಕಾ ಕಾರ್ಖಾನೆಗಳು ಮಾತ್ರ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಖಾನೆಗಳಾಗಿವೆ ಎಂದು ವ್ಯಂಗ್ಯವಾಗಿಡಿದ್ದರು.
ಇದಕ್ಕೆ ತಿರುಗೇಟು ನೀಡಿರುವ ಆಡಳಿತರೂಢ ಟಿಎಂಸಿ ಪಕ್ಷವು, ‘ನಿಮ್ಮ ಗಮನವನ್ನು ಉತ್ತರ ಪ್ರದೇಶದತ್ತ ಕೇಂದ್ರಿಕರಿಸಿ, ಅಲ್ಲಿ ಕಾನೂನಿನ ಅಸ್ತಿತ್ವ ಅಂತ್ಯ ಕಾಣುತ್ತಿದೆ’ ಎಂದು ಹೇಳಿದೆ. ಘೋಷ್ ಅವರು ಪಶ್ಚಿಮ ಬಂಗಾಳದ ಹೆಸರನ್ನು ಹಾಳುಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟಿಎಂಸಿ ದೂರಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.