ಟಿಎಂಸಿ ಕಾರ್ಯಕರ್ತನ ಕೊಲೆ
ಕಳೆದ ಶನಿವಾರ ಬರಾಕ್ಪೋರ್ನಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಗೋಪಾಲ್ ಮಜುಂದಾರ್ ಅವರ ಹತ್ಯೆ ನಡೆದಿದೆ. ಮನೆಗೆ ಹಿಂತಿರುಗುವ ವೇಳೆ ಮಜುಂದಾರ್ ಅವರ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಗುಂಡು ಹಾರಿಸಿ, ಬಳಿಕ ಹಲವು ಬಾರಿ ಇರಿದು ಕೊಲೆ ಮಾಡಿದ್ದಾರೆ. ಕೊಲೆ ಹಿಂದೆ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಇದ್ದಾರೆ ಎಂದು ಆಡಳಿತ ಪಕ್ಷ ಆರೋಪಿಸಿದೆ.