‘ಮತದಾನ ನಡೆಯುತ್ತಿರುವ ಈ ಹಳ್ಳಿಯಲ್ಲಿ ಗಲಾಟೆ ನಡೆಯಿತು. ಈ ವೇಳೆ ಸ್ಥಳೀಯರು ಸಿಐಎಸ್ಎಫ್ ಸಿಬ್ಬಂದಿಗೆ ಘೇರಾವ್ ಹಾಕಿ, ಬಂದೂಕುಗಳನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದರು. ಆಗ ಕೇಂದ್ರೀಯ ಪಡೆಗಳು ಗುಂಡು ಹಾರಿಸಿದವು. ಪ್ರಾಥಮಿಕ ವರದಿಗಳ ಪ್ರಕಾರ, ಸಿಐಎಸ್ಎಫ್ ನಡೆಸಿದ ಗುಂಡಿನ ದಾಳಿಯಿಂದ ನಾಲ್ವರು ಸಾವನ್ನಪ್ಪಿದ್ದಾರೆ‘ ಎಂದು ಅಧಿಕಾರಿ ವಿವರಿಸಿದರು.