ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ಈ ಆದೇಶ ನೀಡಿದೆ. ಈ ಎರಡು ತನಿಖೆಗಳ ಬಗ್ಗೆ ನ್ಯಾಯಾಲಯವು ನಿಗಾವಹಿಸಲಿದೆ ಎಂದು ಪೀಠ ತಿಳಿಸಿದೆ. ಮುಂದಿನ ಆರು ವಾರಗಳಲ್ಲಿ ತನಿಖೆಯ ಪ್ರಗತಿಯನ್ನು ಸಲ್ಲಿಸಬೇಕು ಎಂದು ಪೀಠವು ಸಿಬಿಐಗೆ ನಿರ್ದೇಶನ ನೀಡಿದೆ.