<p class="title"><strong>ಕೋಲ್ಕತ್ತ (ಪಿಟಿಐ):</strong> ಭವಾನಿಪುರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಚುನಾವಣೆ ಆಯೋಗದ ಉದ್ದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಪೂರ್ಣಗೊಳಿಸಿರುವ ಕಲ್ಕತ್ತ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.</p>.<p class="title">ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್, ನ್ಯಾಯಮೂರ್ತಿ ರಾಜರ್ಷಿ ಭಾರಧ್ವಾಜ್ ಅವರಿದ್ದ ಪೀಠವು ವಿಚಾರಣೆ ನಡೆಸಿತು. ಈ ಕ್ಷೇತ್ರಕ್ಕೆ ಸೆ.30ರಂದು ಉಪಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಣದಲ್ಲಿದ್ದಾರೆ.</p>.<p class="title">‘ಸಾಂವಿಧಾನಿಕ ತುರ್ತು ಮತ್ತು ಪಶ್ಚಿಮ ಬಂಗಾಳ ಸರ್ಕಾರದ ವಿಶೇಷ ಮನವಿ ಆಧರಿಸಿ ಉಪಚುನಾವಣೆ ನಡೆಸಲಾಗುತ್ತಿದೆ‘ ಎಂದು ಆಯೋಗ ತಿಳಿಸಿದೆ. ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.</p>.<p class="title">ಆಯೋಗವು ಉಪಚುನಾವಣೆ ನಡೆಸುವ ಮೂಲಕ ಸಾಂವಿಧಾನಿಕ ತುರ್ತು ಪದದ ವ್ಯಾಖ್ಯಾನ ಬದಲಿಸಲು ಹೊರಟಿದೆ. ಚುನಾವಣೆ ನಿಗದಿಯಲ್ಲಿ ರಾಜ್ಯಗಳ ಪಾತ್ರ ಇರದು. ಇದು, ಪೂರ್ಣವಾಗಿ ಆಯೋಗದ ವಿವೇಚನೆಯಾಗಿದೆ ಎಂದೂ ಹೇಳಿದ್ದಾರೆ.</p>.<p class="title">ಉಪಚುನಾವಣೆ ನಡೆಸಲು ಕೋರಿ ಮುಖ್ಯ ಕಾರ್ಯದರ್ಶಿ ಪತ್ರ ಬರೆದಿದ್ದರು. ಆಯೋಗ ಅದಕ್ಕೆ ಸ್ಪಂದಿಸಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೆಪ್ಟೆಂಬರ್ 13ರಂದು ಕೋರ್ಟ್ಗೆ ಮಾಹಿತಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೋಲ್ಕತ್ತ (ಪಿಟಿಐ):</strong> ಭವಾನಿಪುರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಚುನಾವಣೆ ಆಯೋಗದ ಉದ್ದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಪೂರ್ಣಗೊಳಿಸಿರುವ ಕಲ್ಕತ್ತ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.</p>.<p class="title">ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್, ನ್ಯಾಯಮೂರ್ತಿ ರಾಜರ್ಷಿ ಭಾರಧ್ವಾಜ್ ಅವರಿದ್ದ ಪೀಠವು ವಿಚಾರಣೆ ನಡೆಸಿತು. ಈ ಕ್ಷೇತ್ರಕ್ಕೆ ಸೆ.30ರಂದು ಉಪಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಣದಲ್ಲಿದ್ದಾರೆ.</p>.<p class="title">‘ಸಾಂವಿಧಾನಿಕ ತುರ್ತು ಮತ್ತು ಪಶ್ಚಿಮ ಬಂಗಾಳ ಸರ್ಕಾರದ ವಿಶೇಷ ಮನವಿ ಆಧರಿಸಿ ಉಪಚುನಾವಣೆ ನಡೆಸಲಾಗುತ್ತಿದೆ‘ ಎಂದು ಆಯೋಗ ತಿಳಿಸಿದೆ. ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.</p>.<p class="title">ಆಯೋಗವು ಉಪಚುನಾವಣೆ ನಡೆಸುವ ಮೂಲಕ ಸಾಂವಿಧಾನಿಕ ತುರ್ತು ಪದದ ವ್ಯಾಖ್ಯಾನ ಬದಲಿಸಲು ಹೊರಟಿದೆ. ಚುನಾವಣೆ ನಿಗದಿಯಲ್ಲಿ ರಾಜ್ಯಗಳ ಪಾತ್ರ ಇರದು. ಇದು, ಪೂರ್ಣವಾಗಿ ಆಯೋಗದ ವಿವೇಚನೆಯಾಗಿದೆ ಎಂದೂ ಹೇಳಿದ್ದಾರೆ.</p>.<p class="title">ಉಪಚುನಾವಣೆ ನಡೆಸಲು ಕೋರಿ ಮುಖ್ಯ ಕಾರ್ಯದರ್ಶಿ ಪತ್ರ ಬರೆದಿದ್ದರು. ಆಯೋಗ ಅದಕ್ಕೆ ಸ್ಪಂದಿಸಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೆಪ್ಟೆಂಬರ್ 13ರಂದು ಕೋರ್ಟ್ಗೆ ಮಾಹಿತಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>