<p class="title"><strong>ಮುಂಬೈ (ಪಿಟಿಐ):</strong> ಛತ್ರಪತಿ ಶಿವಾಜಿ ಕುರಿತ ಹೇಳಿಕೆಗೆ ತೀವ್ರ ಟೀಕೆಗೆ ಗುರಿಯಾಗಿರುವ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಹುದ್ದೆ ತ್ಯಜಿಸುವ ಇಂಗಿತವನ್ನು ಪ್ರಧಾನಿ ಮೋದಿ ಅವರ ಎದುರು ವ್ಯಕ್ತಪಡಿಸಿರುವುದಾಗಿ ಸೋಮವಾರ ಹೇಳಿದ್ದಾರೆ. </p>.<p class="bodytext">‘ಎಲ್ಲ ರೀತಿಯ ರಾಜಕೀಯ ಜವಾಬ್ದಾರಿಗಳಿಂದ ಬಿಡುಗಡೆ ಪಡೆಯಬೇಕು ಮತ್ತು ಬದುಕಿನ ಮುಂದಿನ ಅವಧಿಯನ್ನು ಓದು, ಬರಹ ಮತ್ತು ಇನ್ನಿತರ ಚಟುವಟಿಕೆಯಲ್ಲಿ ಕಳೆಯಲು ತೀರ್ಮಾನಿಸಿದ್ದೇನೆ. ಈ ಇಂಗಿತವನ್ನು ಇತ್ತೀಚೆಗೆ ಮುಂಬೈಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರ ಬಳಿಯೂ ವ್ಯಕ್ತಪಡಿಸಿದ್ದೇನೆ’ ಎಂದು ಅವರು ಹೇಳಿದ್ದಾರೆ.</p>.<p class="bodytext">‘ಮೋದಿ ಅವರಿಂದ ನಾನು ಸದಾ ಪ್ರೀತಿ, ವಿಶ್ವಾಸ ಗಳಿಸಿದ್ದೇನೆ. ಈ ವಿಚಾರದಲ್ಲೂ ಅವರಿಂದ ಅದನ್ನೇ ನಿರೀಕ್ಷಿಸುತ್ತಿದ್ದೇನೆ’ ಎಂದಿದ್ದಾರೆ. </p>.<p class="bodytext">‘ಸಂತರು, ಸಾಮಾಜ ಸುಧಾರಕರು ಮತ್ತು ಧೀರ ಹೋರಾಟಗಾರರ ಭೂಮಿ ಮಹಾರಾಷ್ಟ್ರದಂತಹ ಭವ್ಯ ರಾಜ್ಯದಲ್ಲಿ ರಾಜ್ಯ ಸೇವಕ ಅಥವಾ ರಾಜ್ಯಪಾಲನಾಗಿ ಸೇವೆ ಸಲ್ಲಿಸಲು ಸಿಕ್ಕಿರುವ ಅವಕಾಶವನ್ನು ಗೌರವ ಮತ್ತು ಸುಯೋಗವೆಂದು ಭಾವಿಸಿರುವೆ’ ಎಂದು ಕೋಶಿಯಾರಿ ಹೇಳಿದ್ದಾರೆ. </p>.<p class="bodytext">ಇತ್ತೀಚೆಗೆ ಛತ್ರಪತಿ ಶಿವಾಜಿ ಅವರಿಗೆ ಅಗೌರವ ಉಂಟು ಮಾಡುವಂತೆ ಕೋಶಿಯಾರಿ ಅವರು ‘ಶಿವಾಜಿ ಹಳೆ ಕಾಲದ ಐಕಾನ್’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಮಹಾರಾಷ್ಟ್ರದಲ್ಲಿ ಭಾರಿ ಟೀಕೆ ವ್ಯಕ್ತವಾಗಿತ್ತು. ಈ ಹಿಂದಿನ ಮಹಾ ವಿಕಾಸ ಅಘಾಡಿ ಮೈತ್ರಿಕೂಟ ಸರ್ಕಾರದ ಅವಧಿಯಲ್ಲೂ ಹಲವು ವಿವಾದಗಳಿಗೆ ಕೋಶಿಯಾರಿ ಗ್ರಾಸವಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ (ಪಿಟಿಐ):</strong> ಛತ್ರಪತಿ ಶಿವಾಜಿ ಕುರಿತ ಹೇಳಿಕೆಗೆ ತೀವ್ರ ಟೀಕೆಗೆ ಗುರಿಯಾಗಿರುವ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಹುದ್ದೆ ತ್ಯಜಿಸುವ ಇಂಗಿತವನ್ನು ಪ್ರಧಾನಿ ಮೋದಿ ಅವರ ಎದುರು ವ್ಯಕ್ತಪಡಿಸಿರುವುದಾಗಿ ಸೋಮವಾರ ಹೇಳಿದ್ದಾರೆ. </p>.<p class="bodytext">‘ಎಲ್ಲ ರೀತಿಯ ರಾಜಕೀಯ ಜವಾಬ್ದಾರಿಗಳಿಂದ ಬಿಡುಗಡೆ ಪಡೆಯಬೇಕು ಮತ್ತು ಬದುಕಿನ ಮುಂದಿನ ಅವಧಿಯನ್ನು ಓದು, ಬರಹ ಮತ್ತು ಇನ್ನಿತರ ಚಟುವಟಿಕೆಯಲ್ಲಿ ಕಳೆಯಲು ತೀರ್ಮಾನಿಸಿದ್ದೇನೆ. ಈ ಇಂಗಿತವನ್ನು ಇತ್ತೀಚೆಗೆ ಮುಂಬೈಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರ ಬಳಿಯೂ ವ್ಯಕ್ತಪಡಿಸಿದ್ದೇನೆ’ ಎಂದು ಅವರು ಹೇಳಿದ್ದಾರೆ.</p>.<p class="bodytext">‘ಮೋದಿ ಅವರಿಂದ ನಾನು ಸದಾ ಪ್ರೀತಿ, ವಿಶ್ವಾಸ ಗಳಿಸಿದ್ದೇನೆ. ಈ ವಿಚಾರದಲ್ಲೂ ಅವರಿಂದ ಅದನ್ನೇ ನಿರೀಕ್ಷಿಸುತ್ತಿದ್ದೇನೆ’ ಎಂದಿದ್ದಾರೆ. </p>.<p class="bodytext">‘ಸಂತರು, ಸಾಮಾಜ ಸುಧಾರಕರು ಮತ್ತು ಧೀರ ಹೋರಾಟಗಾರರ ಭೂಮಿ ಮಹಾರಾಷ್ಟ್ರದಂತಹ ಭವ್ಯ ರಾಜ್ಯದಲ್ಲಿ ರಾಜ್ಯ ಸೇವಕ ಅಥವಾ ರಾಜ್ಯಪಾಲನಾಗಿ ಸೇವೆ ಸಲ್ಲಿಸಲು ಸಿಕ್ಕಿರುವ ಅವಕಾಶವನ್ನು ಗೌರವ ಮತ್ತು ಸುಯೋಗವೆಂದು ಭಾವಿಸಿರುವೆ’ ಎಂದು ಕೋಶಿಯಾರಿ ಹೇಳಿದ್ದಾರೆ. </p>.<p class="bodytext">ಇತ್ತೀಚೆಗೆ ಛತ್ರಪತಿ ಶಿವಾಜಿ ಅವರಿಗೆ ಅಗೌರವ ಉಂಟು ಮಾಡುವಂತೆ ಕೋಶಿಯಾರಿ ಅವರು ‘ಶಿವಾಜಿ ಹಳೆ ಕಾಲದ ಐಕಾನ್’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಮಹಾರಾಷ್ಟ್ರದಲ್ಲಿ ಭಾರಿ ಟೀಕೆ ವ್ಯಕ್ತವಾಗಿತ್ತು. ಈ ಹಿಂದಿನ ಮಹಾ ವಿಕಾಸ ಅಘಾಡಿ ಮೈತ್ರಿಕೂಟ ಸರ್ಕಾರದ ಅವಧಿಯಲ್ಲೂ ಹಲವು ವಿವಾದಗಳಿಗೆ ಕೋಶಿಯಾರಿ ಗ್ರಾಸವಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>