ಈ ಕುರಿತು ಪ್ರತಿಕ್ರಿಯಿಸಿರುವ ಇಂದೋರ್ನ ಪೊಲೀಸ್ ಆಯುಕ್ತ ಎಚ್.ಸಿ. ಮಿಶ್ರಾ, ನಗರದ ಜುನಿ ಪ್ರದೇಶದಲ್ಲಿ ಸ್ನ್ಯಾಕ್ ಅಂಗಡಿಯೊಂದಕ್ಕೆ ಗುರುವಾರ ಸಂಜೆ ಬೆದರಿಕೆ ಪತ್ರ ಬಂದಿದ್ದು, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸುವವರು ಖಾಲ್ಸಾ ಕ್ರೀಡಾಂಗಣದಲ್ಲಿ ಉಳಿದುಕೊಂಡರೆ ನಗರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದುತಿಳಿಸಿದ್ದಾರೆ.