ಈ ಯಾತ್ರೆಯು ಫೆಬ್ರುವರಿ ಮೂರನೇ ವಾರದಲ್ಲಿ ನಡೆಯಬೇಕಿತ್ತು. ಆದರೆ, ಫೆಬ್ರುವರಿ 24 ರಿಂದ 26 ರ ವರೆಗೆ ಛತ್ತೀಸ್ಗಢದಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನ ನಡೆಯುವುದರಿಂದ ಪಕ್ಷದ ಹಿರಿಯ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲು ಅಲ್ಲಿಗೆ ತೆರಳುವ ಸಾಧ್ಯತೆ ಇದೆ. ಹೀಗಾಗಿ ಪಟ್ನಾ–ಗಯಾ ಯಾತ್ರೆಯನ್ನು ಮಾರ್ಚ್ ಮೊದಲ ವಾರಕ್ಕೆ ಮುಂದೂಡಲಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.