<p><strong>ಶ್ರೀನಗರ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೊ ಯಾತ್ರೆಯನ್ನು ಚುನಾವಣೆ ಗೆಲ್ಲುವುದಕ್ಕಾಗಿ ಹಮ್ಮಿಕೊಂಡಿಲ್ಲ. ದೇಶದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಹಬ್ಬಿಸಿರುವ ದ್ವೇಷದ ವಿರುದ್ಧ ಯಾತ್ರೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. </p>.<p>ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ್ ಜೋಡೊ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜುಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಪುನಃ ಸ್ಥಾಪಿಸಲು ರಾಹುಲ್ ಬದ್ಧವಾಗಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಇದನ್ನೂ ಓದಿ: <a href="https://www.prajavani.net/india-news/rahul-gandhi-unfurls-flag-at-bharat-jodo-yatra-campsite-kharge-at-pcc-office-1010960.html" itemprop="url">ಭಾರತ್ ಜೋಡೊ ಯಾತ್ರೆ ಸಮಾರೋಪ ಸಮಾರಂಭ: ರಾಹುಲ್ ಗಾಂಧಿ ಧ್ವಜಾರೋಹಣ </a></p>.<p>ಚುನಾವಣೆ ಗೆಲ್ಲುವುದಕ್ಕಾಗಿ ಅಲ್ಲ ದ್ವೇಷದ ವಿರುದ್ಧ ಯಾತ್ರೆ ಹಮ್ಮಿಕೊಂಡಿದ್ದೇವೆ. ದೇಶದಲ್ಲಿ ಬಿಜೆಪಿಯು ದ್ವೇಷವನ್ನು ಹರಡುತ್ತಿದೆ. ನಿರುದ್ಯೋಗ, ಹಣದುಬ್ಬರದಂತಹ ಸಮಸ್ಯೆಗಳಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ದೇಶವನ್ನು ಒಗ್ಗೂಡಿಸಬಹುದು ಎಂಬುದನ್ನು ರಾಹುಲ್ ಗಾಂಧಿ ಸಾಬೀತು ಮಾಡಿದ್ದಾರೆ ಎಂದು ಹೇಳಿದರು.</p>.<p>ಪ್ರಧಾನಿ ನರೇಂದ್ರ ಮೋದಿ, ಆರ್ಎಸ್ಎಸ್ ಮತ್ತು ಬಿಜೆಪಿಯವರು ಬಡವರನ್ನು ಮತ್ತಷ್ಟು ಬಡವರನ್ನಾಗಿಸಲು ಮತ್ತು ಶ್ರೀಮಂತರನ್ನು ಇನ್ನಷ್ಟು ಶ್ರೀಮಂತರನ್ನಾಗಿಸಲು ಬಯಸುತ್ತದೆ. ದೇಶದ ಶೇ 72ರಷ್ಟು ಸಂಪತ್ತನ್ನು ಶೇ 10ರಷ್ಟು ಜನರು ಲೂಟಿ ಮಾಡುತ್ತಿದ್ದಾರೆ ಎಂದು ಖರ್ಗೆ ಅವರು ಉಲ್ಲೇಖ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೊ ಯಾತ್ರೆಯನ್ನು ಚುನಾವಣೆ ಗೆಲ್ಲುವುದಕ್ಕಾಗಿ ಹಮ್ಮಿಕೊಂಡಿಲ್ಲ. ದೇಶದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಹಬ್ಬಿಸಿರುವ ದ್ವೇಷದ ವಿರುದ್ಧ ಯಾತ್ರೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. </p>.<p>ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ್ ಜೋಡೊ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜುಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಪುನಃ ಸ್ಥಾಪಿಸಲು ರಾಹುಲ್ ಬದ್ಧವಾಗಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಇದನ್ನೂ ಓದಿ: <a href="https://www.prajavani.net/india-news/rahul-gandhi-unfurls-flag-at-bharat-jodo-yatra-campsite-kharge-at-pcc-office-1010960.html" itemprop="url">ಭಾರತ್ ಜೋಡೊ ಯಾತ್ರೆ ಸಮಾರೋಪ ಸಮಾರಂಭ: ರಾಹುಲ್ ಗಾಂಧಿ ಧ್ವಜಾರೋಹಣ </a></p>.<p>ಚುನಾವಣೆ ಗೆಲ್ಲುವುದಕ್ಕಾಗಿ ಅಲ್ಲ ದ್ವೇಷದ ವಿರುದ್ಧ ಯಾತ್ರೆ ಹಮ್ಮಿಕೊಂಡಿದ್ದೇವೆ. ದೇಶದಲ್ಲಿ ಬಿಜೆಪಿಯು ದ್ವೇಷವನ್ನು ಹರಡುತ್ತಿದೆ. ನಿರುದ್ಯೋಗ, ಹಣದುಬ್ಬರದಂತಹ ಸಮಸ್ಯೆಗಳಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ದೇಶವನ್ನು ಒಗ್ಗೂಡಿಸಬಹುದು ಎಂಬುದನ್ನು ರಾಹುಲ್ ಗಾಂಧಿ ಸಾಬೀತು ಮಾಡಿದ್ದಾರೆ ಎಂದು ಹೇಳಿದರು.</p>.<p>ಪ್ರಧಾನಿ ನರೇಂದ್ರ ಮೋದಿ, ಆರ್ಎಸ್ಎಸ್ ಮತ್ತು ಬಿಜೆಪಿಯವರು ಬಡವರನ್ನು ಮತ್ತಷ್ಟು ಬಡವರನ್ನಾಗಿಸಲು ಮತ್ತು ಶ್ರೀಮಂತರನ್ನು ಇನ್ನಷ್ಟು ಶ್ರೀಮಂತರನ್ನಾಗಿಸಲು ಬಯಸುತ್ತದೆ. ದೇಶದ ಶೇ 72ರಷ್ಟು ಸಂಪತ್ತನ್ನು ಶೇ 10ರಷ್ಟು ಜನರು ಲೂಟಿ ಮಾಡುತ್ತಿದ್ದಾರೆ ಎಂದು ಖರ್ಗೆ ಅವರು ಉಲ್ಲೇಖ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>