<p><strong>ಆಲಪ್ಪುಳ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ಪ್ರಸಿದ್ಧ ದೋಣಿ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ.</p>.<p>ಭಾರತ್ ಜೋಡೊ ಯಾತ್ರೆಯ 12ನೇ ದಿನವಾದ ಸೋಮವಾರ ಆಲಪ್ಪುಳದಿಂದ ಪಾದಯಾತ್ರೆಮುಂದುವರಿಸಲಾಯಿತು.</p>.<p>ಮಧ್ಯಾಹ್ನದ ಬಳಿಕ ಭಾರತ್ ಜೋಡೊ ಯಾತ್ರೆಯ ಭಾಗವಾಗಿ ಪುನ್ನಮಡ ಹಿನ್ನೀರಿನಲ್ಲಿ ವಿಶೇಷ ದೋಣಿ ಪ್ರದರ್ಶನ ಸ್ಪರ್ಧೆ ಏರ್ಪಡಿಸಲಾಯಿತು.</p>.<p>ಇದನ್ನೂ ಓದಿ:<a href="https://www.prajavani.net/india-news/tharoor-endorses-petition-seeking-pledge-by-aicc-prez-candidates-to-implement-udaipur-declaration-if-973343.html" itemprop="url">ಕಾಂಗ್ರೆಸ್ ಸುಧಾರಣೆ: ಯುವ ಸದಸ್ಯರ ಮನವಿಗೆ ತರೂರ್ ಅನುಮೋದನೆ </a></p>.<p>ರಾಹುಲ್ ಗಾಂಧಿ ಅವರು ಸ್ಪರ್ಧೆಯಲ್ಲಿ ಭಾಗವಹಿಸಿದ ವಿಡಿಯೊವನ್ನು ಸುದ್ದಿ ಸಂಸ್ಥೆ 'ಎಎನ್ಐ' ಪ್ರಕಟಿಸಿದೆ. ಅಲ್ಲದೆ ಕೇರಳದಲ್ಲಿ ಭಾರತ್ ಜೋಡೊ ಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ವರದಿಯಾಗಿದೆ.</p>.<p>ಕೇರಳದಲ್ಲಿ ಓಣಂ ಹಬ್ಬದ ಪ್ರಯುಕ್ತ ವರ್ಷಂಪ್ರತಿ ನೆಹರೂ ಟ್ರೋಫಿ ದೋಣಿ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತದೆ. ಈ ಬಾರಿಯ ಸ್ಪರ್ಧೆ ತಿಂಗಳಾರಂಭದಲ್ಲಿ ಆಯೋಜನೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಪ್ಪುಳ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ಪ್ರಸಿದ್ಧ ದೋಣಿ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ.</p>.<p>ಭಾರತ್ ಜೋಡೊ ಯಾತ್ರೆಯ 12ನೇ ದಿನವಾದ ಸೋಮವಾರ ಆಲಪ್ಪುಳದಿಂದ ಪಾದಯಾತ್ರೆಮುಂದುವರಿಸಲಾಯಿತು.</p>.<p>ಮಧ್ಯಾಹ್ನದ ಬಳಿಕ ಭಾರತ್ ಜೋಡೊ ಯಾತ್ರೆಯ ಭಾಗವಾಗಿ ಪುನ್ನಮಡ ಹಿನ್ನೀರಿನಲ್ಲಿ ವಿಶೇಷ ದೋಣಿ ಪ್ರದರ್ಶನ ಸ್ಪರ್ಧೆ ಏರ್ಪಡಿಸಲಾಯಿತು.</p>.<p>ಇದನ್ನೂ ಓದಿ:<a href="https://www.prajavani.net/india-news/tharoor-endorses-petition-seeking-pledge-by-aicc-prez-candidates-to-implement-udaipur-declaration-if-973343.html" itemprop="url">ಕಾಂಗ್ರೆಸ್ ಸುಧಾರಣೆ: ಯುವ ಸದಸ್ಯರ ಮನವಿಗೆ ತರೂರ್ ಅನುಮೋದನೆ </a></p>.<p>ರಾಹುಲ್ ಗಾಂಧಿ ಅವರು ಸ್ಪರ್ಧೆಯಲ್ಲಿ ಭಾಗವಹಿಸಿದ ವಿಡಿಯೊವನ್ನು ಸುದ್ದಿ ಸಂಸ್ಥೆ 'ಎಎನ್ಐ' ಪ್ರಕಟಿಸಿದೆ. ಅಲ್ಲದೆ ಕೇರಳದಲ್ಲಿ ಭಾರತ್ ಜೋಡೊ ಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ವರದಿಯಾಗಿದೆ.</p>.<p>ಕೇರಳದಲ್ಲಿ ಓಣಂ ಹಬ್ಬದ ಪ್ರಯುಕ್ತ ವರ್ಷಂಪ್ರತಿ ನೆಹರೂ ಟ್ರೋಫಿ ದೋಣಿ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತದೆ. ಈ ಬಾರಿಯ ಸ್ಪರ್ಧೆ ತಿಂಗಳಾರಂಭದಲ್ಲಿ ಆಯೋಜನೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>