ಭಾರತ್ ಯಾತ್ರೆ ವೇಳೆ ಬಾಂಬ್ ಸ್ಫೋಟಿಸುವುದಾಗಿ ನವೆಂಬರ್ 17ರಂದು ಇಂದೋರ್ನ ಜುನಿ ಪ್ರದೇಶದಲ್ಲಿರುವ ಸಿಹಿ ತಿನಿಸುಗಳ ಅಂಗಡಿಯೊಂದಕ್ಕೆ ಅನಾಮಧೇಯ ಪತ್ರ ಬಂದಿತ್ತು. ಈ ಪತ್ರದಲ್ಲಿ 1984ರ ಸಿಖ್ ವಿರೋಧಿ ಗಲಭೆಯನ್ನು ಉಲ್ಲೇಖಿಸಿ, ರಾಹುಲ್ ಅವರನ್ನು ಹತ್ಯೆ ಮಾಡುವುದಾಗಿಯೂ ಉಲ್ಲೇಖಿಸಲಾಗಿತ್ತು. ಬಳಿಕ, ಈ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು.