<p><strong>ಇಂದೋರ್, ಮಧ್ಯಪ್ರದೇಶ:</strong> ಮಧ್ಯಪ್ರದೇಶದಲ್ಲಿ ಐದನೇ ದಿನಕ್ಕೆ ಕಾಲಿಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ’ ಯಾತ್ರೆಯು ಭಾನುವಾರ ಇಂದೋರ್ಗೆ ತಲುಪಿದೆ.</p>.<p>ಯಾತ್ರೆಯಲ್ಲಿ ಸಮಾಜದ ವಿವಿಧ ವರ್ಗಗಳ ಜನರು ಪಾಲ್ಗೊಂಡಿದ್ದರು. ಯಾತ್ರೆಯಲ್ಲಿ ಭಾಗಿಯಾಗಿದ್ದ ಮನೋಹರ್ ಎಂಬ ಅಂಗವಿಕಲನ ಗಾಲಿಕುರ್ಚಿಯನ್ನು ರಾಹುಲ್ ಗಾಂಧಿ ಅವರು ಸ್ವಲ್ಪ ದೂರದವರೆಗೆ ತಳ್ಳುತ್ತಾ ಯಾತ್ರೆ ಮುಂದುವರಿಸಿದ ದೃಶ್ಯ ಕಂಡುಬಂದಿತು. ಈ ವೇಳೆ, ‘ದೇಶಕ್ಕೆ ಈಗ ಬದಲಾವಣೆಯ ಅಗತ್ಯವಿದೆ ಎಂಬುದಾಗಿ ರಾಹುಲ್ ಅವರಿಗೆ ಹೇಳಿದ್ದೇನೆ’ ಎಂದು ಮನೋಹರ್ ತಿಳಿಸಿದರು.</p>.<p>ಯಾತ್ರೆಯು ಶನಿವಾರ ರಾತ್ರಿ ಮಹೂ ತಲುಪಿತ್ತು. ಭಾನುವಾರ ರಾವೂ ಮೂಲಕ ಇಂದೋರ್ ತಲುಪಿತು. ‘ಭಾರತ್ ಜೋಡೊ ಯಾತ್ರೆ ಹಿನ್ನೆಲೆಯಲ್ಲಿ ಭದ್ರತೆಗಾಗಿ ನಗರದಾದ್ಯಂತ 1,400 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು, ವಿವಿಧೆಡೆ ಬ್ಯಾರಿಕೇಡ್ಗಳನ್ನೂ ಹಾಕಲಾಗಿತ್ತು’ ಎಂದು ಇಂದೋರ್ ಪೊಲೀಸ್ ಕಮಿಷನರ್ ಎಚ್.ಸಿ. ಮಿಶ್ರಾ ಹೇಳಿದರು.</p>.<p>‘ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ರಾಜವಾಡದ 12 ಮನೆಗಳು ಹಾಗೂ ಬೀದಿಗಳನ್ನು ತಾತ್ಕಾಲಿಕವಾಗಿ ಖಾಲಿ ಮಾಡಿಸಲಾಗಿದೆ’ ಎಂದೂ ಅವರು ಹೇಳಿದರು.</p>.<p>ಭಾರತ್ ಯಾತ್ರೆ ವೇಳೆ ಬಾಂಬ್ ಸ್ಫೋಟಿಸುವುದಾಗಿ ನವೆಂಬರ್ 17ರಂದು ಇಂದೋರ್ನ ಜುನಿ ಪ್ರದೇಶದಲ್ಲಿರುವ ಸಿಹಿ ತಿನಿಸುಗಳ ಅಂಗಡಿಯೊಂದಕ್ಕೆ ಅನಾಮಧೇಯ ಪತ್ರ ಬಂದಿತ್ತು. ಈ ಪತ್ರದಲ್ಲಿ 1984ರ ಸಿಖ್ ವಿರೋಧಿ ಗಲಭೆಯನ್ನು ಉಲ್ಲೇಖಿಸಿ, ರಾಹುಲ್ ಅವರನ್ನು ಹತ್ಯೆ ಮಾಡುವುದಾಗಿಯೂ ಉಲ್ಲೇಖಿಸಲಾಗಿತ್ತು. ಬಳಿಕ, ಈ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್, ಮಧ್ಯಪ್ರದೇಶ:</strong> ಮಧ್ಯಪ್ರದೇಶದಲ್ಲಿ ಐದನೇ ದಿನಕ್ಕೆ ಕಾಲಿಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ’ ಯಾತ್ರೆಯು ಭಾನುವಾರ ಇಂದೋರ್ಗೆ ತಲುಪಿದೆ.</p>.<p>ಯಾತ್ರೆಯಲ್ಲಿ ಸಮಾಜದ ವಿವಿಧ ವರ್ಗಗಳ ಜನರು ಪಾಲ್ಗೊಂಡಿದ್ದರು. ಯಾತ್ರೆಯಲ್ಲಿ ಭಾಗಿಯಾಗಿದ್ದ ಮನೋಹರ್ ಎಂಬ ಅಂಗವಿಕಲನ ಗಾಲಿಕುರ್ಚಿಯನ್ನು ರಾಹುಲ್ ಗಾಂಧಿ ಅವರು ಸ್ವಲ್ಪ ದೂರದವರೆಗೆ ತಳ್ಳುತ್ತಾ ಯಾತ್ರೆ ಮುಂದುವರಿಸಿದ ದೃಶ್ಯ ಕಂಡುಬಂದಿತು. ಈ ವೇಳೆ, ‘ದೇಶಕ್ಕೆ ಈಗ ಬದಲಾವಣೆಯ ಅಗತ್ಯವಿದೆ ಎಂಬುದಾಗಿ ರಾಹುಲ್ ಅವರಿಗೆ ಹೇಳಿದ್ದೇನೆ’ ಎಂದು ಮನೋಹರ್ ತಿಳಿಸಿದರು.</p>.<p>ಯಾತ್ರೆಯು ಶನಿವಾರ ರಾತ್ರಿ ಮಹೂ ತಲುಪಿತ್ತು. ಭಾನುವಾರ ರಾವೂ ಮೂಲಕ ಇಂದೋರ್ ತಲುಪಿತು. ‘ಭಾರತ್ ಜೋಡೊ ಯಾತ್ರೆ ಹಿನ್ನೆಲೆಯಲ್ಲಿ ಭದ್ರತೆಗಾಗಿ ನಗರದಾದ್ಯಂತ 1,400 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು, ವಿವಿಧೆಡೆ ಬ್ಯಾರಿಕೇಡ್ಗಳನ್ನೂ ಹಾಕಲಾಗಿತ್ತು’ ಎಂದು ಇಂದೋರ್ ಪೊಲೀಸ್ ಕಮಿಷನರ್ ಎಚ್.ಸಿ. ಮಿಶ್ರಾ ಹೇಳಿದರು.</p>.<p>‘ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ರಾಜವಾಡದ 12 ಮನೆಗಳು ಹಾಗೂ ಬೀದಿಗಳನ್ನು ತಾತ್ಕಾಲಿಕವಾಗಿ ಖಾಲಿ ಮಾಡಿಸಲಾಗಿದೆ’ ಎಂದೂ ಅವರು ಹೇಳಿದರು.</p>.<p>ಭಾರತ್ ಯಾತ್ರೆ ವೇಳೆ ಬಾಂಬ್ ಸ್ಫೋಟಿಸುವುದಾಗಿ ನವೆಂಬರ್ 17ರಂದು ಇಂದೋರ್ನ ಜುನಿ ಪ್ರದೇಶದಲ್ಲಿರುವ ಸಿಹಿ ತಿನಿಸುಗಳ ಅಂಗಡಿಯೊಂದಕ್ಕೆ ಅನಾಮಧೇಯ ಪತ್ರ ಬಂದಿತ್ತು. ಈ ಪತ್ರದಲ್ಲಿ 1984ರ ಸಿಖ್ ವಿರೋಧಿ ಗಲಭೆಯನ್ನು ಉಲ್ಲೇಖಿಸಿ, ರಾಹುಲ್ ಅವರನ್ನು ಹತ್ಯೆ ಮಾಡುವುದಾಗಿಯೂ ಉಲ್ಲೇಖಿಸಲಾಗಿತ್ತು. ಬಳಿಕ, ಈ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>