ಮುಂಬೈ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ 68ನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರದ ವಿರಾಮದ ನಂತರಸೋಮವಾರ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಕಲಂನುರಿಯಿಂದ ಪುನರಾರಂಭವಾಗಿದೆ. ಜವಹರಲಾಲ್ ನೆಹರೂ ಅವರ 133ನೇ ಜನ್ಮದಿನದ ಅಂಗವಾಗಿ ಅವರ ‘ಡಿಸ್ಕವರಿ ಆಫ್ ಇಂಡಿಯಾ’ ಪುಸ್ತಕದ 600 ಪ್ರತಿಗಳನ್ನು ಯಾತ್ರೆಯಲ್ಲಿ ಭಾಗವಹಿಸಿದವರಿಗೆ ವಿತರಿಸಲಾಯಿತು ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಂ ರಮೇಶ್ ತಿಳಿಸಿದ್ದಾರೆ.