ಭಾರತ್ ಜೋಡೋ ಯಾತ್ರೆ: ಮಹಾರಾಷ್ಟ್ರದಲ್ಲಿ ನೆಹರೂ ಪುಸ್ತಕ ವಿತರಣೆ

ಮುಂಬೈ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ 68ನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರದ ವಿರಾಮದ ನಂತರ ಸೋಮವಾರ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಕಲಂನುರಿಯಿಂದ ಪುನರಾರಂಭವಾಗಿದೆ. ಜವಹರಲಾಲ್ ನೆಹರೂ ಅವರ 133ನೇ ಜನ್ಮದಿನದ ಅಂಗವಾಗಿ ಅವರ ‘ಡಿಸ್ಕವರಿ ಆಫ್ ಇಂಡಿಯಾ’ ಪುಸ್ತಕದ 600 ಪ್ರತಿಗಳನ್ನು ಯಾತ್ರೆಯಲ್ಲಿ ಭಾಗವಹಿಸಿದವರಿಗೆ ವಿತರಿಸಲಾಯಿತು ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಂ ರಮೇಶ್ ತಿಳಿಸಿದ್ದಾರೆ.
ಭಾರತ್ ಜೋಡೋ ಯಾತ್ರೆಯು ನ.20 ರಂದು ಮಧ್ಯಪ್ರದೇಶವನ್ನು ಪ್ರವೇಶಿಸುವುದಕ್ಕೂ ಮುನ್ನ ಮಹಾರಾಷ್ಟ್ರದ ಐದು ಜಿಲ್ಲೆಗಳಲ್ಲಿ 382 ಕಿಮೀ ಕ್ರಮಿಸಲಿದೆ. ಸೆ.7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆ ಇದುವರೆಗೆ ಆರು ರಾಜ್ಯಗಳ 28 ಜಿಲ್ಲೆಗಳಲ್ಲಿ ಪೂರ್ಣಗೊಂಡಿದೆ. 150 ದಿನಗಳಲ್ಲಿ 12 ರಾಜ್ಯಗಳನ್ನು ಒಳಗೊಂಡಂತೆ 3,570 ಕಿ.ಮೀ. ಪ್ರಯಾಣಿಸಿದ ನಂತರ ಜಮ್ಮು–ಕಾಶ್ಮೀರದಲ್ಲಿ ಯಾತ್ರೆ ಕೊನೆಗೊಳ್ಳಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.