<p><strong>ಹೈದರಾಬಾದ್:</strong> ಜಾತಿನಿಂದನೆಗೊಳಗಾಗಿ 2016 ಜ.17ರಂದು ಹೈದರಾಬಾದ್ ಕೇಂದ್ರ ವಿ.ವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಪಿಎಚ್.ಡಿ ವಿದ್ಯಾರ್ಥಿ ರೋಹಿತ್ ವೇಮುಲ ಅವರ ತಾಯಿ ರಾಧಿಕಾ ವೇಮುಲಾ 'ಭಾರತ್ ಜೋಡೊ ಯಾತ್ರೆ'ಯಲ್ಲಿ ಪಾಲ್ಗೊಂಡರು. ಮಂಗಳವಾರ ಬೆಳಿಗ್ಗೆ ರಾಹುಲ್ ಗಾಂಧಿ ಅವರ ಜೊತೆ ಹೆಜ್ಜೆ ಹಾಕಿದರು.</p>.<p>ಇದೇ ವೇಳೆ ಮಾತನಾಡಿದ ರಾಹುಲ್ ಗಾಂಧಿ, ರೋಹಿತ್ ವೇಮುಲಾ ಅವರು ಸಾಮಾಜಿಕ ಅಸಮಾನತೆ ಮತ್ತು ಅನ್ಯಾಯ ವಿರುದ್ಧದ ಹೋರಾಟದ ಸಂಕೇತವಾಗಿದ್ದಾರೆ ಎಂದರು.</p>.<p>'ಭಾರತ್ ಜೋಡೊ ಯಾತ್ರೆಯ ಐಕಮತ್ಯಕ್ಕೆ ಓಗೊಟ್ಟು ರಾಹುಲ್ ಗಾಂಧಿ ಅವರ ಜೊತೆಗೆ ಹೆಜ್ಜೆ ಹಾಕುತ್ತಿದ್ದೇನೆ. ಬಿಜೆಪಿ-ಆರೆಸ್ಸೆಸ್ನಿಂದ ಸಂವಿಧಾನವನ್ನು ಕಾಪಾಡುವಂತೆ ಕಾಂಗ್ರೆಸ್ಗೆ ಮನವಿ ಮಾಡಿದ್ದೇನೆ. ರೋಹಿತ್ಗೆ ನ್ಯಾಯ ದೊರಕಿಸಿಕೊಡುವಂತೆ, ರೋಹಿತ್ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವಂತೆ, ದಲಿತರ ಪ್ರಾತಿನಿಧ್ಯ ಹೆಚ್ಚಿಸುವಂತೆ, ಎಲ್ಲರಿಗೂ ಶಿಕ್ಷಣ ನೀಡುವಂತೆ ಮನವಿ ಮಾಡಿದ್ದೇನೆ ಎಂದು ರಾಧಿಕಾ ವೇಮುಲಾ ಅವರು ರಾಹುಲ್ ಭೇಟಿಯ ಬಳಿಕ ಟ್ವೀಟ್ ಮಾಡಿದ್ದಾರೆ.</p>.<p>'ನಿರ್ಧಿಷ್ಠ ಗುರಿಯೆಡೆಗಿನ ನಮ್ಮ ಪ್ರಯಾಣಕ್ಕೆ ರೋಹಿತ್ ಅವರ ತಾಯಿಯ ಭೇಟಿ ಹೊಸ ಸ್ಥೈರ್ಯವನ್ನು ತುಂಬಿದೆ. ಮನಸ್ಸಿಗೆ ಶಾಂತಿ ಸಿಕ್ಕಿದೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಕಾಂಗ್ರೆಸ್ ಮತ್ತು ಪಕ್ಷದ ಕಾರ್ಯಕರ್ತರು ರಾಧಿಕಾ ವೇಮುಲಾ ಅವರು ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.</p>.<p>2016ರ ಜನವರಿ 17ರಂದು 26 ವರ್ಷದ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಅವರು ಆತ್ಮಹತ್ಯೆ ಮಾಡಿಕೊಂಡಾಗ ರಾಷ್ಟ್ರ ಮಟ್ಟದಲ್ಲಿ ಜಾತಿನಿಂದನೆ ವಿರುದ್ಧ ಹೋರಾಟ ನಡೆದಿತ್ತು. ಈ ಸಂದರ್ಭ ರಾಹುಲ್ ಗಾಂಧಿ ಅವರು ವಿದ್ಯಾರ್ಥಿಗಳ ಹೋರಾಟದಲ್ಲಿ ಜೊತೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಜಾತಿನಿಂದನೆಗೊಳಗಾಗಿ 2016 ಜ.17ರಂದು ಹೈದರಾಬಾದ್ ಕೇಂದ್ರ ವಿ.ವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಪಿಎಚ್.ಡಿ ವಿದ್ಯಾರ್ಥಿ ರೋಹಿತ್ ವೇಮುಲ ಅವರ ತಾಯಿ ರಾಧಿಕಾ ವೇಮುಲಾ 'ಭಾರತ್ ಜೋಡೊ ಯಾತ್ರೆ'ಯಲ್ಲಿ ಪಾಲ್ಗೊಂಡರು. ಮಂಗಳವಾರ ಬೆಳಿಗ್ಗೆ ರಾಹುಲ್ ಗಾಂಧಿ ಅವರ ಜೊತೆ ಹೆಜ್ಜೆ ಹಾಕಿದರು.</p>.<p>ಇದೇ ವೇಳೆ ಮಾತನಾಡಿದ ರಾಹುಲ್ ಗಾಂಧಿ, ರೋಹಿತ್ ವೇಮುಲಾ ಅವರು ಸಾಮಾಜಿಕ ಅಸಮಾನತೆ ಮತ್ತು ಅನ್ಯಾಯ ವಿರುದ್ಧದ ಹೋರಾಟದ ಸಂಕೇತವಾಗಿದ್ದಾರೆ ಎಂದರು.</p>.<p>'ಭಾರತ್ ಜೋಡೊ ಯಾತ್ರೆಯ ಐಕಮತ್ಯಕ್ಕೆ ಓಗೊಟ್ಟು ರಾಹುಲ್ ಗಾಂಧಿ ಅವರ ಜೊತೆಗೆ ಹೆಜ್ಜೆ ಹಾಕುತ್ತಿದ್ದೇನೆ. ಬಿಜೆಪಿ-ಆರೆಸ್ಸೆಸ್ನಿಂದ ಸಂವಿಧಾನವನ್ನು ಕಾಪಾಡುವಂತೆ ಕಾಂಗ್ರೆಸ್ಗೆ ಮನವಿ ಮಾಡಿದ್ದೇನೆ. ರೋಹಿತ್ಗೆ ನ್ಯಾಯ ದೊರಕಿಸಿಕೊಡುವಂತೆ, ರೋಹಿತ್ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವಂತೆ, ದಲಿತರ ಪ್ರಾತಿನಿಧ್ಯ ಹೆಚ್ಚಿಸುವಂತೆ, ಎಲ್ಲರಿಗೂ ಶಿಕ್ಷಣ ನೀಡುವಂತೆ ಮನವಿ ಮಾಡಿದ್ದೇನೆ ಎಂದು ರಾಧಿಕಾ ವೇಮುಲಾ ಅವರು ರಾಹುಲ್ ಭೇಟಿಯ ಬಳಿಕ ಟ್ವೀಟ್ ಮಾಡಿದ್ದಾರೆ.</p>.<p>'ನಿರ್ಧಿಷ್ಠ ಗುರಿಯೆಡೆಗಿನ ನಮ್ಮ ಪ್ರಯಾಣಕ್ಕೆ ರೋಹಿತ್ ಅವರ ತಾಯಿಯ ಭೇಟಿ ಹೊಸ ಸ್ಥೈರ್ಯವನ್ನು ತುಂಬಿದೆ. ಮನಸ್ಸಿಗೆ ಶಾಂತಿ ಸಿಕ್ಕಿದೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಕಾಂಗ್ರೆಸ್ ಮತ್ತು ಪಕ್ಷದ ಕಾರ್ಯಕರ್ತರು ರಾಧಿಕಾ ವೇಮುಲಾ ಅವರು ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.</p>.<p>2016ರ ಜನವರಿ 17ರಂದು 26 ವರ್ಷದ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಅವರು ಆತ್ಮಹತ್ಯೆ ಮಾಡಿಕೊಂಡಾಗ ರಾಷ್ಟ್ರ ಮಟ್ಟದಲ್ಲಿ ಜಾತಿನಿಂದನೆ ವಿರುದ್ಧ ಹೋರಾಟ ನಡೆದಿತ್ತು. ಈ ಸಂದರ್ಭ ರಾಹುಲ್ ಗಾಂಧಿ ಅವರು ವಿದ್ಯಾರ್ಥಿಗಳ ಹೋರಾಟದಲ್ಲಿ ಜೊತೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>