'ಭಾರತ್ ಜೋಡೊ ಯಾತ್ರೆಯ ಐಕಮತ್ಯಕ್ಕೆ ಓಗೊಟ್ಟು ರಾಹುಲ್ ಗಾಂಧಿ ಅವರ ಜೊತೆಗೆ ಹೆಜ್ಜೆ ಹಾಕುತ್ತಿದ್ದೇನೆ. ಬಿಜೆಪಿ-ಆರೆಸ್ಸೆಸ್ನಿಂದ ಸಂವಿಧಾನವನ್ನು ಕಾಪಾಡುವಂತೆ ಕಾಂಗ್ರೆಸ್ಗೆ ಮನವಿ ಮಾಡಿದ್ದೇನೆ. ರೋಹಿತ್ಗೆ ನ್ಯಾಯ ದೊರಕಿಸಿಕೊಡುವಂತೆ, ರೋಹಿತ್ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವಂತೆ, ದಲಿತರ ಪ್ರಾತಿನಿಧ್ಯ ಹೆಚ್ಚಿಸುವಂತೆ, ಎಲ್ಲರಿಗೂ ಶಿಕ್ಷಣ ನೀಡುವಂತೆ ಮನವಿ ಮಾಡಿದ್ದೇನೆ ಎಂದು ರಾಧಿಕಾ ವೇಮುಲಾ ಅವರು ರಾಹುಲ್ ಭೇಟಿಯ ಬಳಿಕ ಟ್ವೀಟ್ ಮಾಡಿದ್ದಾರೆ.