‘ಇಂದು ನಮಗೆಲ್ಲರಿಗೂ ಐತಿಹಾಸಿಕ ಕ್ಷಣ, ಕೋಟ್ಯಂತರ ನಾಗರಿಕರ ಬೆಂಬಲದೊಂದಿಗೆ ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಅಂತಿಮ ಗಮ್ಯ ತಲುಪಿದೆ. ನಿಮ್ಮ ಕಠಿಣ ಪರಿಶ್ರಮದಿಂದ ಪ್ರೀತಿಯ ಸಂದೇಶವು ದೇಶದ ಮೂಲೆ ಮೂಲೆಯನ್ನು ತಲುಪಿದೆ. ನಾವು ಪ್ರೀತಿಯ ಸಂದೇಶದೊಂದಿಗೆ ದೃಢವಾಗಿ ಉಳಿಯಬೇಕು ಮತ್ತು ದೇಶವನ್ನು ಮುನ್ನಡೆಸಲು ಒಂದಾಗಬೇಕು’ ಎಂದು ಶ್ರೀನಗರದ ಲಾಲ್ಚೌಕ್ನಲ್ಲಿ ಧ್ವಜಾರೋಹಣ ಬಳಿಕ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.