ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LIVE | ‘ಭಾರತ್‌ ಬಂದ್‌': ರಾಜ್ಯದಲ್ಲಿ ಪ್ರತಿಭಟನೆ ನಿರಂತರ, ಹಲವು ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ
LIVE

ನೂತನ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ರೈತ ಸಂಘಗಳು, 20ಕ್ಕೂ ಹೆಚ್ಚು ರಾಜಕೀಯ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಮಂಗಳವಾರ ಭಾರತ್‌ ಬಂದ್‌ ಆಚರಿಸುತ್ತಿವೆ. ಬಂದ್‌ನ ಕ್ಷಣ ಕ್ಷಣ ಮಾಹಿತಿಯ ತಾಜಾ ಅಪ್ಡೇಟ್‌ ಇಲ್ಲಿದೆ...
Last Updated 8 ಡಿಸೆಂಬರ್ 2020, 12:10 IST
ಅಕ್ಷರ ಗಾತ್ರ
12:0908 Dec 2020

ರಾಜ್ಯದಲ್ಲಿ ಭಾರತ್‌ ಬಂದ್‌ಗೆ ಬೆಂಬಲವಿಲ್ಲ: ಬಿಎಸ್‌ವೈ

ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ಬಂದ್‌ಗೆ ಜನರು ಬೆಂಬಲ ಸೂಚಿಸಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರ ಪರವಾಗಿದೆ. ಪ್ರಧಾನಿ ಮೋದಿ ಅವರು ರೈತ ವಿರೋಧಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

11:3608 Dec 2020
10:2108 Dec 2020

ಉಚಿತವಾಗಿ ಹಾಲು ವಿತರಿಸಿ, ರೈತರ ಪ್ರತಿಭಟನೆಗೆ ಬೆಂಬಲ

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿರುವ ವಾಡಿಗೋಡ್ರಿ ಹಳ್ಳಿಯ ರೈತರು ತಾವು ಕರೆದ ಹಾಲನ್ನು ಮಂಗಳವಾರ ಸುತ್ತಮುತ್ತಲಿನ ಹಳ್ಳಿಗರಿಗೆ ಉಚಿತವಾಗಿ ವಿತರಿಸುವ ಮೂಲಕ ನೂತನ ಕೃಷಿ ಕಾಯ್ದೆಗಳ ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ಕರೆ ನೀಡಿರುವ ‘ಭಾರತ್‌ ಬಂದ್‌‘ಗೆ ಬೆಂಬಲ ವ್ಯಕ್ತಪಡಿಸಿದರು.

10:0308 Dec 2020
09:0708 Dec 2020

ಬೆಂಗಳೂರಿನ ಟೌನ್‌ಹಾಲ್‌ ಮುಂಭಾಗ ಪ್ರತಿಭಟನೆ

ಕೃಷಿ ಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಗಳು ನೀಡಿರುವ ‘ಭಾರತ್‌ ಬಂದ್‌’ ಕರೆಗೆ ವಿವಿಧ ಸಂಘಟನೆಗಳು ಸೇರಿದಂತೆ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ಬೆಂಗಳೂರಿನ ಟೌನ್‌ಹಾಲ್‌ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

08:5908 Dec 2020

ಕೆ.ಆರ್‌.ಮಾರುಕಟ್ಟೆಯಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು

08:5008 Dec 2020

ಹೊಸಪೇಟೆಯಲ್ಲಿ ಮುಂದುವರಿದ ಪ್ರತಿಭಟನೆ

ಪ್ರತಿಭಟನಾಕಾರರು ಹೊಸಪೇಟೆ ನಗರದ ರೋಟರಿ ವೃತ್ತದಲ್ಲಿ ನರೇಂದ್ರ ಮೋದಿ, ಅಮಿತ್ ಷಾ, ಮುಕೇಶ್ ಅಂಬಾನಿ, ಅದಾನಿ ಹಾಗೂ ನರೇಂದ್ರ ಸಿಂಗ್ ತೋಮರ್ ಅವರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

08:3008 Dec 2020

ದೆಹಲಿ ಸರೋಜಿನಿ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಕಪ್ಪು ಪಟ್ಟಿ ಧರಿಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.

08:1408 Dec 2020

ಬಳ್ಳಾರಿಯಲ್ಲಿ‌ ಬಂದ್ ಅಂಗವಾಗಿ ನಡೆದ ಪ್ರತಿಭಟನಾ ಸಭೆಯಲ್ಲಿ ಕಾರ್ಮಿಕ ಮುಖಂಡ ಕೆ.ಸೋಮಶೇಖರ್ ಮಾತನಾಡಿದರು.

08:0608 Dec 2020

ರಾಮನಗರದ ಐಜೂರು ವೃತ್ತದಲ್ಲಿ ರೈತ ಸಂಘದ ವಿವಿಧ ಬಣಗಳು ಪ್ರತಿಭಟನೆ ನಡೆಸಿದವು.