ಆರ್ಜೆಡಿ ಸಂಸದ ಮನೋಜ್ ಝಾ, ಡಿಎಂಕೆ ಸಂಸದ ತಿರುಚ್ಚಿ ಶಿವ ಹಾಗೂ ಛತ್ತೀಸಗಡದ ರಾಕೇಶ್ ವೈಷ್ಣವ್ ಎಂಬುವರುಈ ಕಾಯ್ದೆಗಳ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಈಚೆಗೆ ವಿಚಾರಣೆಗೆ ಎತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠವು ಕೇಂದ್ರಕ್ಕೆ ನೋಟಿಸ್ ನೀಡಿತ್ತು. ಈ ಅರ್ಜಿಯಲ್ಲಿ ತನ್ನನ್ನೂ ಕಕ್ಷಿದಾರನನ್ನಾಗಿ ಪರಿಗಣಿಸಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ನ (ಭಾನು ಬಣ) ಅಧ್ಯಕ್ಷ ಭಾನು ಪ್ರತಾಪ್ ಸಿಂಗ್ ಅರ್ಜಿಯಲ್ಲಿ ಹೇಳಿದ್ದಾರೆ.