ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಪ್ರಶ್ನಿಸಿ ಹಾಡು ರಚಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ನೇಹಾ ಅವರು ಅಪ್ಲೋಡ್ ಮಾಡಿದ್ದರು. ಇದಕ್ಕೆ ಸಂಬಂಧಿಸಿ ಪೊಲೀಸರು ನೇಹಾ ಅವರಿಗೆ ಮಂಗಳವಾರ ರಾತ್ರಿ ನೋಟಿಸ್ ನೀಡಿದ್ದಾರೆ. ಈ ಹಾಡು ಜನರ ಮಧ್ಯೆ ದ್ವೇಷ ಭಾವನೆ ಕೆರಳಿಸುವಂತಿದೆ ಎಂದು ನೋಟಿಸ್ನಲ್ಲಿ ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.