ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಂಗ ನಿಂದನೆ; ತೀರ್ಪು ಪ್ರಶ್ನಿಸಿ ಪ್ರಶಾಂತ್ ಭೂಷಣ್ ಮರುಪರಿಶೀಲನಾ ಅರ್ಜಿ

Last Updated 1 ಅಕ್ಟೋಬರ್ 2020, 8:22 IST
ಅಕ್ಷರ ಗಾತ್ರ

ನವದೆಹಲಿ: ತಮ್ಮ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆಗಸ್ಟ್ 31ರಂದು ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿವಕೀಲ ಪ್ರಶಾಂತ್ ಭೂಷಣ್ ಅವರು ಸುಪ್ರಿಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯ ಅನ್ವಯ ಸೆಪ್ಟೆಂಬರ್ 14ರಂದು ₹1 ದಂಡ ಪಾವತಿಸಿದ್ದ ಪ್ರಶಾಂತ್ ಭೂಷಣ್,ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳಲ್ಲಿ ಒಂದು ಅರ್ಜಿ ನ್ಯಾಯಾಂಗ ನಿಂದನೆ ಪ್ರಕರಣದ ವಿರುದ್ಧ ಆಗಸ್ಟ್‌ 14ರಂದು ನೀಡಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದೆ. ಇನ್ನೊಂದು ಆಗಸ್ಟ್‌ 31ರಂದು ನೀಡಿದ ಶಿಕ್ಷೆ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯಾಗಿದೆ.

ವಕೀಲರಾದ ಕಾಮಿನಿ ಜೈಸ್ವಾಲ್ ಅವರ ಮೂಲಕ ಸಲ್ಲಿಸಲಾದ ಎರಡನೇ ಪರಿಶೀಲನಾ ಅರ್ಜಿಯಲ್ಲಿ ಭೂಷಣ್ ಅವರು, ಈ ವಿಷಯದ ಬಗ್ಗೆ ಮುಕ್ತ ನ್ಯಾಯಾಲಯದಲ್ಲಿ ಮೌಖಿಕ ವಿಚಾರಣೆ ನಡೆಸಬೇಕೆಂದು ಕೋರಿದ್ದಾರೆ. ಈಗ ನೀಡಿರುವ ಆಕ್ಷೇಪಾರ್ಹ ತೀರ್ಪುನ್ನು ಉಲ್ಲೇಖಿಸಿರುವ ಅವರು, ಹೊಸದಾಗಿ ವಿಚಾರಣೆ ನಡೆಸುವಂತೆ ಮರುಪರಿಶೀಲನಾ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅರ್ಜಿಯಲ್ಲಿ ಎತ್ತಿರುವ ಪ್ರಶ್ನೆಗಳ ವಿಚಾರಣೆ ನಡೆಸಲು ದೊಡ್ಡ ಪೀಠಕ್ಕೆ ವರ್ಗಾಯಿಸಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT