<p><strong>ಪಟ್ನಾ</strong>: ಬಿಹಾರದಲ್ಲಿ ಚುನಾವಣಾ ಫಲಿತಾಂಶದ ದಿನದಂದು ನಡೆಯುವ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲವೆಂದು ತನ್ನ ಕಾರ್ಯಕರ್ತರಿಗೆ ಆರ್ಜೆಡಿ ಪಕ್ಷವು ಎಚ್ಚರಿಕೆ ನೀಡಿದೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಆರ್ಜೆಡಿ, 'ನವೆಂಬರ್ 10ರಂದು ಬರಲಿರುವ ಚುನಾವಣಾ ಫಲಿತಾಂಶಗಳು ಏನೇ ಇರಲಿ. ಅದನ್ನು ಕಾರ್ಯಕರ್ತರು ಸಂಪೂರ್ಣ ಸಂಯಮ ಹಾಗೂ ಸೌಜನ್ಯದಿಂದ ಸ್ವೀಕರಿಸಬೇಕು' ಎಂದು ತಾಕೀತು ಮಾಡಿದೆ.</p>.<p>'ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸುವುದು, ಗಾಳಿಯಲ್ಲಿ ಗುಂಡು ಹಾರಿಸಿ ವಿಜಯೋತ್ಸವ ಆಚರಿಸುವುದು ಮತ್ತು ಪ್ರತಿಸ್ಪರ್ಧಿಗಳೊಂದಿಗೆ ಕಾರ್ಯಕರ್ತರು ಅನುಚಿತವಾಗಿ ವರ್ತಿಸುವುದನ್ನು ಸಹಿಸಲಾಗುವುದಿಲ್ಲ' ಎಂದು ಆರ್ಜೆಡಿ ಟ್ವೀಟ್ ಮಾಡಿದೆ.</p>.<p>ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಅವರು ತಮ್ಮ 32ನೇ ಹುಟ್ಟುಹಬ್ಬ ಆಚರಿಸಿಕೊಂಡ ಮರುದಿನ(ನವೆಂಬರ್ 10) ಬಿಹಾರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.</p>.<p>ಮತದಾನೋತ್ತರ ಸಮೀಕ್ಷೆಗಳ ಪ್ರಕಾರ, ಆರ್ಜೆಡಿ ನೇತೃತ್ವದ ಮಹಾಘಟಬಂಧನವು ಗೆಲ್ಲುವ ಸಾಧ್ಯತೆ ಹೆಚ್ಚಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರದಲ್ಲಿ ಚುನಾವಣಾ ಫಲಿತಾಂಶದ ದಿನದಂದು ನಡೆಯುವ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲವೆಂದು ತನ್ನ ಕಾರ್ಯಕರ್ತರಿಗೆ ಆರ್ಜೆಡಿ ಪಕ್ಷವು ಎಚ್ಚರಿಕೆ ನೀಡಿದೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಆರ್ಜೆಡಿ, 'ನವೆಂಬರ್ 10ರಂದು ಬರಲಿರುವ ಚುನಾವಣಾ ಫಲಿತಾಂಶಗಳು ಏನೇ ಇರಲಿ. ಅದನ್ನು ಕಾರ್ಯಕರ್ತರು ಸಂಪೂರ್ಣ ಸಂಯಮ ಹಾಗೂ ಸೌಜನ್ಯದಿಂದ ಸ್ವೀಕರಿಸಬೇಕು' ಎಂದು ತಾಕೀತು ಮಾಡಿದೆ.</p>.<p>'ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸುವುದು, ಗಾಳಿಯಲ್ಲಿ ಗುಂಡು ಹಾರಿಸಿ ವಿಜಯೋತ್ಸವ ಆಚರಿಸುವುದು ಮತ್ತು ಪ್ರತಿಸ್ಪರ್ಧಿಗಳೊಂದಿಗೆ ಕಾರ್ಯಕರ್ತರು ಅನುಚಿತವಾಗಿ ವರ್ತಿಸುವುದನ್ನು ಸಹಿಸಲಾಗುವುದಿಲ್ಲ' ಎಂದು ಆರ್ಜೆಡಿ ಟ್ವೀಟ್ ಮಾಡಿದೆ.</p>.<p>ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಅವರು ತಮ್ಮ 32ನೇ ಹುಟ್ಟುಹಬ್ಬ ಆಚರಿಸಿಕೊಂಡ ಮರುದಿನ(ನವೆಂಬರ್ 10) ಬಿಹಾರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.</p>.<p>ಮತದಾನೋತ್ತರ ಸಮೀಕ್ಷೆಗಳ ಪ್ರಕಾರ, ಆರ್ಜೆಡಿ ನೇತೃತ್ವದ ಮಹಾಘಟಬಂಧನವು ಗೆಲ್ಲುವ ಸಾಧ್ಯತೆ ಹೆಚ್ಚಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>