ಆರ್ಆರ್ಬಿ ಎನ್ಟಿಪಿಸಿ ಹುದ್ದೆಗಳ ಭರ್ತಿಗಾಗಿ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆ ವಿರೋಧಿಸಿ ಹಲವೆಡೆ ಉದ್ಯೋಗಾಕಾಂಕ್ಷಿಗಳು ಬುಧವಾರ ನಡೆಸಿದ ಪ್ರತಿಭಟನೆಯು ಹಿಂಸಾರೂಪಕ್ಕೆ ತಿರುಗಿತ್ತು. ಪ್ರಯಾಣಿಕ ರೈಲಿಗೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದರು. ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗಿಸಿದ್ದರು.