<p><strong>ನವದೆಹಲಿ</strong>: ಬಿಹಾರದಲ್ಲಿ ಬಿಜೆಪಿ ಹಾಗೂ ಜೆಡಿ (ಯು) ಮೈತ್ರಿ ಮುರಿದು ಬಿದ್ದಿದ್ದು, ಮಾಜಿ ಮುಖ್ಯಮಂತ್ರಿ ಲಾಲುಪ್ರಸಾದ್ ಯಾದವ್ ಅವರ ಆರ್ಜೆಡಿ ಜೊತೆ ಹೆಜ್ಜೆ ಹಾಕಲು ನಿತೀಶ್ ಕುಮಾರ್ ಮುಂದಾಗಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಲಾಲುಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ, ‘ಲಾಲುಇಲ್ಲದೇ ಬಿಹಾರ ಚಾಲೂ ಆಗುವುದಿಲ್ಲ’ ಎಂಬ ಬೋಜಪುರಿ ವಿಡಿಯೊ ಹಾಡೊಂದನ್ನು ಹಂಚಿಕೊಂಡು ಬಿಜೆಪಿ ವಿರುದ್ಧ ಟೀಕಾಪ್ರಹಾರ ಮಾಡಿದ್ದಾರೆ.</p>.<p>ವೈರಲ್ ಆಗಿದ್ದ ಈ ಹಾಡು 2020 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ ಬಳಸಿತ್ತು. ಇದೇ ಹಾಡನ್ನು ಹಂಚಿಕೊಂಡು ರೋಹಿಣಿ ಅವರು, ‘ಪಟ್ಟಾಭಿಷೇಕಕ್ಕೆ ತಯಾರಾಗಿ, ಲಾಟೀನು ಹಿಡಿದವರು ಬರುತ್ತಿದ್ದಾರೆ’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ.</p>.<p>ಅಲ್ಲದೇ ಅವರು ತಮ್ಮ ತಂದೆಯನ್ನು ಕಿಂಗ್ ಮೇಕರ್ ಎಂದು ಕರೆದಿದ್ದಾರೆ. ಮೇವು ಹಗರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಲಾಲುಅವರು ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>2015–2017 ರವರೆಗಿನ ಸಮ್ಮಿಶ್ರ ಸರ್ಕಾರದಲ್ಲಿ ತೇಜಸ್ವಿ ಯಾದವ್ ಅವರು ಡಿಸಿಎಂ ಆಗಿದ್ದರು. ಇದೀಗ ಹೊಸ ಸರ್ಕಾರದಲ್ಲಿ ತೇಜಸ್ವಿ ಮತ್ತೆ ಡಿಸಿಎಂ ಆಗಬಹುದು ಎನ್ನಲಾಗುತ್ತಿದೆ.</p>.<p><a href="https://www.prajavani.net/karnataka-news/hd-devegowda-bihar-political-development-janata-parivar-prime-minister-youngsters-961835.html" itemprop="url">ಬಿಹಾರ ಬೆಳವಣಿಗೆ ಕಂಡು ಜನತಾ ಪರಿವಾರ ಒಟ್ಟಿಗಿದ್ದ ಕಾಲ ಮೆಲುಕು ಹಾಕಿದ ದೇವೇಗೌಡ </a></p>.<p><a href="https://www.prajavani.net/india-news/bihar-politics-nitish-kumar-confirms-that-he-has-resigned-as-cm-961784.html" itemprop="url">ಬಿಹಾರ ರಾಜಕೀಯ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಹಾರದಲ್ಲಿ ಬಿಜೆಪಿ ಹಾಗೂ ಜೆಡಿ (ಯು) ಮೈತ್ರಿ ಮುರಿದು ಬಿದ್ದಿದ್ದು, ಮಾಜಿ ಮುಖ್ಯಮಂತ್ರಿ ಲಾಲುಪ್ರಸಾದ್ ಯಾದವ್ ಅವರ ಆರ್ಜೆಡಿ ಜೊತೆ ಹೆಜ್ಜೆ ಹಾಕಲು ನಿತೀಶ್ ಕುಮಾರ್ ಮುಂದಾಗಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಲಾಲುಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ, ‘ಲಾಲುಇಲ್ಲದೇ ಬಿಹಾರ ಚಾಲೂ ಆಗುವುದಿಲ್ಲ’ ಎಂಬ ಬೋಜಪುರಿ ವಿಡಿಯೊ ಹಾಡೊಂದನ್ನು ಹಂಚಿಕೊಂಡು ಬಿಜೆಪಿ ವಿರುದ್ಧ ಟೀಕಾಪ್ರಹಾರ ಮಾಡಿದ್ದಾರೆ.</p>.<p>ವೈರಲ್ ಆಗಿದ್ದ ಈ ಹಾಡು 2020 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ ಬಳಸಿತ್ತು. ಇದೇ ಹಾಡನ್ನು ಹಂಚಿಕೊಂಡು ರೋಹಿಣಿ ಅವರು, ‘ಪಟ್ಟಾಭಿಷೇಕಕ್ಕೆ ತಯಾರಾಗಿ, ಲಾಟೀನು ಹಿಡಿದವರು ಬರುತ್ತಿದ್ದಾರೆ’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ.</p>.<p>ಅಲ್ಲದೇ ಅವರು ತಮ್ಮ ತಂದೆಯನ್ನು ಕಿಂಗ್ ಮೇಕರ್ ಎಂದು ಕರೆದಿದ್ದಾರೆ. ಮೇವು ಹಗರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಲಾಲುಅವರು ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>2015–2017 ರವರೆಗಿನ ಸಮ್ಮಿಶ್ರ ಸರ್ಕಾರದಲ್ಲಿ ತೇಜಸ್ವಿ ಯಾದವ್ ಅವರು ಡಿಸಿಎಂ ಆಗಿದ್ದರು. ಇದೀಗ ಹೊಸ ಸರ್ಕಾರದಲ್ಲಿ ತೇಜಸ್ವಿ ಮತ್ತೆ ಡಿಸಿಎಂ ಆಗಬಹುದು ಎನ್ನಲಾಗುತ್ತಿದೆ.</p>.<p><a href="https://www.prajavani.net/karnataka-news/hd-devegowda-bihar-political-development-janata-parivar-prime-minister-youngsters-961835.html" itemprop="url">ಬಿಹಾರ ಬೆಳವಣಿಗೆ ಕಂಡು ಜನತಾ ಪರಿವಾರ ಒಟ್ಟಿಗಿದ್ದ ಕಾಲ ಮೆಲುಕು ಹಾಕಿದ ದೇವೇಗೌಡ </a></p>.<p><a href="https://www.prajavani.net/india-news/bihar-politics-nitish-kumar-confirms-that-he-has-resigned-as-cm-961784.html" itemprop="url">ಬಿಹಾರ ರಾಜಕೀಯ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>