<p><strong>ಪಟ್ನಾ:</strong> ಬಿಹಾರದ ಸರನ್ ಜಿಲ್ಲೆಯಲ್ಲಿ ಕಳ್ಳಬಟ್ಟಿ ಸೇವಿಸಿಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.</p>.<p>ಕಳ್ಳಬಟ್ಟಿ ಸೇವಿಸಿ ಇಂದು ಒಂದೇ ದಿನಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.</p>.<p>‘ಸ್ಥಳೀಯ ಅಂಗಡಿಯೊಂದರಲ್ಲಿ ಹಲವರು ಒಟ್ಟಾಗಿ ಮಂಗಳವಾರ ರಾತ್ರಿ ಮದ್ಯ ಸೇವಿಸಿದ್ದರು. ಮನೆಗೆ ಹಿಂತಿರುಗಿದಾಗ ಕೆಲವರು ಅಸ್ವಸ್ಥರಾದರು. ಈ ಪೈಕಿ ಆರು ಮಂದಿ ಸಾವಿಗೀಡಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಇಶುವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಕೈಗೊಳ್ಳಲಾಗಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ಕುಮಾರ್ ತಿಳಿಸಿದ್ದಾರೆ.</p>.<p>2016ರ ಏಪ್ರಿಲ್ನಲ್ಲಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದೆ.</p>.<p><strong>ವಿಧಾನಸಭೆಯಲ್ಲಿ ಬಿಜೆಪಿ ಗದ್ದಲ:</strong>ಕಳ್ಳಬಟ್ಟಿ ದುರಂತದ ವಿಷಯವು ಬಿಹಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಯಿತು.</p>.<p>ವಿಧಾನಸಭೆಯೊಳಗೆ ಗದ್ದಲ ಸೃಷ್ಟಿಸಿದ ಬಿಜೆಪಿಯ ಶಾಸಕರು ಅಕ್ರಮ ಮದ್ಯ ಮಾರಾಟ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ,ದುರಂತದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬದ ಸದಸ್ಯರಿಗೆ ಪರಿಹಾರ ನೀಡಬೇಕು ಎಂದು ಘೋಷಣೆ ಕೂಗಿದರು. </p>.<p>ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ, ‘ಬಿಹಾರದಲ್ಲಿ ಮದ್ಯ ಸೇವಿಸುವುದು ಅಪರಾಧ ಎಂಬುದನ್ನು ಬಿಜೆಪಿ ಸದಸ್ಯರು ಅರ್ಥಮಾಡಿಕೊಳ್ಳಬೇಕು. ಇದರಿಂದ ಉಂಟಾಗುವ ಸಾವಿಗೆ ಯಾವುದೇ ಪರಿಹಾರ ನೀಡಲಾಗದು.ಒಂದು ವೇಳೆ ನೀಡಿದರೆ ಇದು ಮದ್ಯಸೇವನೆಯನ್ನು ಬೆಂಬಲಿಸುವುದಕ್ಕೆ ಸಮಾನವಾಗಿರುತ್ತದೆ’ ಎಂದರು.</p>.<p>ಪಟ್ಟುಬಿಡದ ಬಿಜೆಪಿ ಶಾಸಕರು ಮತ್ತೆ ಗದ್ದಲ ಎಬ್ಬಿಸಿದಾಗ, ಸ್ಪೀಕರ್ ಅವಧ್ ಬಿಹಾರಿ ಚೌಧರಿ ಅವರು ಕಲಾಪವನ್ನು 15 ನಿಮಿಷಗಳ ಅವಧಿಗೆ ಮುಂದೂಡಿದರು. ಕಲಾಪ ಪುನರ್ ಆರಂಭವಾದಾಗಲೂ ಅಶಿಸ್ತು ಮುಂದುವರಿಯಿತು. ಶೂನ್ಯವೇಳೆಯಲ್ಲಿ ವಿರೋಧಪಕ್ಷದವರು ಮುಖ್ಯಮಂತ್ರಿಯವರ ರಾಜೀನಾಮೆಗೆ ಆಗ್ರಹಿಸಿದರು.</p>.<p><strong>ಲೋಕಸಭೆಯಲ್ಲೂ ಪ್ರಸ್ತಾಪ:</strong>ಲೋಕಸಭೆಯ ಶೂನ್ಯವೇಳೆಯಲ್ಲಿ ಬಿಜೆಪಿಯ ಸಂಸದ ಜನಾರ್ದನ ಸಿಂಗ್ ಸಿಗ್ರಿವಾಲಾ ಅವರು, ಬಿಹಾರದ ಕಳ್ಳಬಟ್ಟಿ ದುರಂತದ ಕುರಿತು ಪ್ರಸ್ತಾಪಿಸಿ, ಸರನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.</p>.<p>‘ಬಿಹಾರದಲ್ಲಿ ಪ್ರತಿದಿನ ನೂರಾರು ಜನರು ಅಕ್ರಮ ಮದ್ಯ ಸೇವಿಸಿ ಸಾಯುತ್ತಿದ್ದಾರೆ. ಬುಧವಾರ ನಡೆದ ದುರಂತದಲ್ಲಿ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಜನಾರ್ದನ್ ಆರೋಪಿದರು.</p>.<p>ಗೋರಖ್ಪುರ ಕ್ಷೇತ್ರದ ಬಿಜೆಪಿ ಸಂಸದರವಿ ಕಿಶನ್ ಶುಕ್ಲಾ ಅವರು ಜಿಮ್ಗಳಲ್ಲಿ ಯುವ ನಟರು ಸಾವಿಗೀಡಾಗುತ್ತಿರುವ ವಿಷಯವನ್ನು ಪ್ರಸ್ತಾಪಿಸಿದರು. ಕೇಂದ್ರ ಆರೋಗ್ಯ ಸಚಿವಾಲಯವು ಈ ವಿಷಯವನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಬೇಕೆಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರದ ಸರನ್ ಜಿಲ್ಲೆಯಲ್ಲಿ ಕಳ್ಳಬಟ್ಟಿ ಸೇವಿಸಿಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.</p>.<p>ಕಳ್ಳಬಟ್ಟಿ ಸೇವಿಸಿ ಇಂದು ಒಂದೇ ದಿನಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.</p>.<p>‘ಸ್ಥಳೀಯ ಅಂಗಡಿಯೊಂದರಲ್ಲಿ ಹಲವರು ಒಟ್ಟಾಗಿ ಮಂಗಳವಾರ ರಾತ್ರಿ ಮದ್ಯ ಸೇವಿಸಿದ್ದರು. ಮನೆಗೆ ಹಿಂತಿರುಗಿದಾಗ ಕೆಲವರು ಅಸ್ವಸ್ಥರಾದರು. ಈ ಪೈಕಿ ಆರು ಮಂದಿ ಸಾವಿಗೀಡಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಇಶುವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಕೈಗೊಳ್ಳಲಾಗಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ಕುಮಾರ್ ತಿಳಿಸಿದ್ದಾರೆ.</p>.<p>2016ರ ಏಪ್ರಿಲ್ನಲ್ಲಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದೆ.</p>.<p><strong>ವಿಧಾನಸಭೆಯಲ್ಲಿ ಬಿಜೆಪಿ ಗದ್ದಲ:</strong>ಕಳ್ಳಬಟ್ಟಿ ದುರಂತದ ವಿಷಯವು ಬಿಹಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಯಿತು.</p>.<p>ವಿಧಾನಸಭೆಯೊಳಗೆ ಗದ್ದಲ ಸೃಷ್ಟಿಸಿದ ಬಿಜೆಪಿಯ ಶಾಸಕರು ಅಕ್ರಮ ಮದ್ಯ ಮಾರಾಟ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ,ದುರಂತದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬದ ಸದಸ್ಯರಿಗೆ ಪರಿಹಾರ ನೀಡಬೇಕು ಎಂದು ಘೋಷಣೆ ಕೂಗಿದರು. </p>.<p>ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ, ‘ಬಿಹಾರದಲ್ಲಿ ಮದ್ಯ ಸೇವಿಸುವುದು ಅಪರಾಧ ಎಂಬುದನ್ನು ಬಿಜೆಪಿ ಸದಸ್ಯರು ಅರ್ಥಮಾಡಿಕೊಳ್ಳಬೇಕು. ಇದರಿಂದ ಉಂಟಾಗುವ ಸಾವಿಗೆ ಯಾವುದೇ ಪರಿಹಾರ ನೀಡಲಾಗದು.ಒಂದು ವೇಳೆ ನೀಡಿದರೆ ಇದು ಮದ್ಯಸೇವನೆಯನ್ನು ಬೆಂಬಲಿಸುವುದಕ್ಕೆ ಸಮಾನವಾಗಿರುತ್ತದೆ’ ಎಂದರು.</p>.<p>ಪಟ್ಟುಬಿಡದ ಬಿಜೆಪಿ ಶಾಸಕರು ಮತ್ತೆ ಗದ್ದಲ ಎಬ್ಬಿಸಿದಾಗ, ಸ್ಪೀಕರ್ ಅವಧ್ ಬಿಹಾರಿ ಚೌಧರಿ ಅವರು ಕಲಾಪವನ್ನು 15 ನಿಮಿಷಗಳ ಅವಧಿಗೆ ಮುಂದೂಡಿದರು. ಕಲಾಪ ಪುನರ್ ಆರಂಭವಾದಾಗಲೂ ಅಶಿಸ್ತು ಮುಂದುವರಿಯಿತು. ಶೂನ್ಯವೇಳೆಯಲ್ಲಿ ವಿರೋಧಪಕ್ಷದವರು ಮುಖ್ಯಮಂತ್ರಿಯವರ ರಾಜೀನಾಮೆಗೆ ಆಗ್ರಹಿಸಿದರು.</p>.<p><strong>ಲೋಕಸಭೆಯಲ್ಲೂ ಪ್ರಸ್ತಾಪ:</strong>ಲೋಕಸಭೆಯ ಶೂನ್ಯವೇಳೆಯಲ್ಲಿ ಬಿಜೆಪಿಯ ಸಂಸದ ಜನಾರ್ದನ ಸಿಂಗ್ ಸಿಗ್ರಿವಾಲಾ ಅವರು, ಬಿಹಾರದ ಕಳ್ಳಬಟ್ಟಿ ದುರಂತದ ಕುರಿತು ಪ್ರಸ್ತಾಪಿಸಿ, ಸರನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.</p>.<p>‘ಬಿಹಾರದಲ್ಲಿ ಪ್ರತಿದಿನ ನೂರಾರು ಜನರು ಅಕ್ರಮ ಮದ್ಯ ಸೇವಿಸಿ ಸಾಯುತ್ತಿದ್ದಾರೆ. ಬುಧವಾರ ನಡೆದ ದುರಂತದಲ್ಲಿ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಜನಾರ್ದನ್ ಆರೋಪಿದರು.</p>.<p>ಗೋರಖ್ಪುರ ಕ್ಷೇತ್ರದ ಬಿಜೆಪಿ ಸಂಸದರವಿ ಕಿಶನ್ ಶುಕ್ಲಾ ಅವರು ಜಿಮ್ಗಳಲ್ಲಿ ಯುವ ನಟರು ಸಾವಿಗೀಡಾಗುತ್ತಿರುವ ವಿಷಯವನ್ನು ಪ್ರಸ್ತಾಪಿಸಿದರು. ಕೇಂದ್ರ ಆರೋಗ್ಯ ಸಚಿವಾಲಯವು ಈ ವಿಷಯವನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಬೇಕೆಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>