ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ವರಿತ ವಿಚಾರಣೆಗೆ ಅಮಾನತು ಶಿಕ್ಷೆ: ಸುಪ್ರೀಂ ಮೆಟ್ಟಿಲೇರಿದ ನ್ಯಾಯಾಧೀಶ

Last Updated 29 ಜುಲೈ 2022, 15:52 IST
ಅಕ್ಷರ ಗಾತ್ರ

ನವದೆಹಲಿ: ‘ಕ್ಷಿಪ್ರಗತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶ ನೀಡಿದ್ದಕ್ಕೆ ತಮ್ಮನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ’ ಎಂದು ಬಿಹಾರದ ನ್ಯಾಯಾಧೀಶರೊಬ್ಬರು ಹೇಳಿದ್ದು, ಅಮಾನತು ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಪೋಕ್ಸೊ ಪ್ರಕರಣವನ್ನು ಒಂದೇ ದಿನದಲ್ಲಿ ವಿಚಾರಣೆ ಪೂರ್ಣಗೊಳಿಸಿ ಆದೇಶ ನೀಡಲಾಗಿತ್ತು ಎಂದುನ್ಯಾಯಾಧೀಶ ಶಶಿಕಾಂತ್‌ ರಾಯ್‌ ತಿಳಿಸಿದ್ದಾರೆ. ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸಮ್ಮತಿಸಿದ್ದು, ಬಿಹಾರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಅರಾರಿಯಾದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾಗಿರುವ ರಾಯ್‌ ಅವರ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಯು.ಯು.ಲಲಿತ್‌ ಮತ್ತು ಎಸ್‌.ಆರ್.ಭಟ್‌ ಅವರಿದ್ದ ಪೀಠ ವಿಚಾರಣೆ ನಡೆಸುತ್ತಿದೆ.

ಆರು ವರ್ಷದ ಬಾಲಕಿ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದ ಪೋಕ್ಸೊ ಪ್ರಕರಣವನ್ನು ಒಂದೇ ದಿನದಲ್ಲಿ ಇತ್ಯರ್ಥಪಡಿಸಲಾಗಿತ್ತು. ತ್ವರಿತಗತಿಯ ತೀರ್ಪು ನೀಡಿದ್ದಕ್ಕೆ ವ್ಯಾಪ‍ಕವಾಗಿ ಶ್ಲಾಘನೆಯೂ ವ್ಯಕ್ತವಾಗಿತ್ತು ಎಂದು ನ್ಯಾಯಾಧೀಶರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಅರ್ಜಿದಾರರ ಪರವಾಗಿ ಹಾಜರಿದ್ದ ವಕೀಲರು, ನ್ಯಾಯಾಧೀಶರಿಗೆ ಬಡ್ತಿಯನ್ನು ನಿರಾಕರಿಸಲಾಗಿದೆ ಎಂದು ಪೀಠದ ಗಮನಕ್ಕೆ ತಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT